ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು. 

ಶಕ್ತಿ ಯೋಜನೆ:

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:

ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago