ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು. 

ಶಕ್ತಿ ಯೋಜನೆ:

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:

ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

17 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago