ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು. 

ಶಕ್ತಿ ಯೋಜನೆ:

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:

ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago