Categories: ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ  ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago