ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ ಕೂಡ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತು ಕೊಳ್ಳುತ್ತಿದ್ದಾರೆ ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ನಗರದ ಬಸವ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೂದಿಯಾಗುತ್ತೆ ಎಂದು ವೀರಪ್ಪ ಮೊಯ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು.. ಈ ವಿಚಾರ ಕುರಿತು ಬಿ.ವೈ ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಗೆದ್ದಿದ್ದೆವೆ ಎಂಬ ಭ್ರಮೆಯಲ್ಲಿದ್ದಾರೆ..ರಾಜ್ಯದಲ್ಲಿ 25 ಸ್ಥಾನ ಗೆದ್ದು ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸಮಾಜಘಾತುಕ ಕೃತ್ಯ, ಸಮಾಜ, ದೇಶ ವಿರೋಧಿ ಚಟುವಟಿಕೆಗಳು ಜಾಸ್ತಿಯಾಗುತ್ತಿರುವುದು ಖಂಡನೀಯ. ಸಿದ್ದರಾಮಯ್ಯರ ಹಿಂದಿನ ಸರ್ಕಾರದಲ್ಲೂ ಇಂತಹದೇ ಪ್ರಕರಣಗಳು ನಡೆದಿದ್ದವು ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…