ಗ್ಯಾರಂಟಿ ಯೋಜನೆ ಜಾರಿಗೆ ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನ ಬಳಸಿ ದಲಿತ ಸಮುದಾಯಕ್ಕೆ ಅನ್ಯಾಯ- ರಾಜ್ಯ ಗೆದ್ದ ಕಾಂಗ್ರೆಸ್ ಗೆ ದೇಶ ಗೆದ್ದ ಭ್ರಮೆಯಲ್ಲಿದೆ – ಬಿವೈವಿ

ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ ಕೂಡ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತು ಕೊಳ್ಳುತ್ತಿದ್ದಾರೆ ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ನಗರದ ಬಸವ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೂದಿಯಾಗುತ್ತೆ ಎಂದು ವೀರಪ್ಪ ಮೊಯ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು.. ಈ ವಿಚಾರ ಕುರಿತು ಬಿ.ವೈ ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಗೆದ್ದಿದ್ದೆವೆ ಎಂಬ ಭ್ರಮೆಯಲ್ಲಿದ್ದಾರೆ..ರಾಜ್ಯದಲ್ಲಿ 25 ಸ್ಥಾನ ಗೆದ್ದು ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸಮಾಜಘಾತುಕ ಕೃತ್ಯ, ಸಮಾಜ, ದೇಶ ವಿರೋಧಿ ಚಟುವಟಿಕೆಗಳು ಜಾಸ್ತಿಯಾಗುತ್ತಿರುವುದು ಖಂಡನೀಯ. ಸಿದ್ದರಾಮಯ್ಯರ ಹಿಂದಿನ ಸರ್ಕಾರದಲ್ಲೂ ಇಂತಹದೇ ಪ್ರಕರಣಗಳು ನಡೆದಿದ್ದವು ಎಂದರು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 hour ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

3 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

10 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

18 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

19 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago