ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ ಕೂಡ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತು ಕೊಳ್ಳುತ್ತಿದ್ದಾರೆ ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ನಗರದ ಬಸವ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೂದಿಯಾಗುತ್ತೆ ಎಂದು ವೀರಪ್ಪ ಮೊಯ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು.. ಈ ವಿಚಾರ ಕುರಿತು ಬಿ.ವೈ ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಗೆದ್ದಿದ್ದೆವೆ ಎಂಬ ಭ್ರಮೆಯಲ್ಲಿದ್ದಾರೆ..ರಾಜ್ಯದಲ್ಲಿ 25 ಸ್ಥಾನ ಗೆದ್ದು ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸಮಾಜಘಾತುಕ ಕೃತ್ಯ, ಸಮಾಜ, ದೇಶ ವಿರೋಧಿ ಚಟುವಟಿಕೆಗಳು ಜಾಸ್ತಿಯಾಗುತ್ತಿರುವುದು ಖಂಡನೀಯ. ಸಿದ್ದರಾಮಯ್ಯರ ಹಿಂದಿನ ಸರ್ಕಾರದಲ್ಲೂ ಇಂತಹದೇ ಪ್ರಕರಣಗಳು ನಡೆದಿದ್ದವು ಎಂದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…