Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

8 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

11 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

11 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

24 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago