ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು
ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು
ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…