Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

8 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

17 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

18 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

20 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

21 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

21 hours ago