Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago