Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

13 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

15 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

21 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

22 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago