Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago