Categories: ಕೋಲಾರ

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಸೇರಿದಂತೆ ಸರ್ವೆ ಮಾಡಿ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿ ರಾಜ್ಯದಲ್ಲಿ ಮಾದರಿ ತಾಲೂಕು ಮಾಡಬೇಕು ಎಂದರು

ಸೌಲಭ್ಯಗಳ ಕುರಿತಂತೆ ಈಗಾಗಲೇ ಕೆಲವು ಕಡೆಯಲ್ಲಿ ದೂರುಗಳು ಬಂದಿವೆ ಮುಂದೆ ಅ ರೀತಿಯಲ್ಲಿ ಆಗಲಾರದಂತೆ ನೋಡಿಕೊಳ್ಳಬೇಕು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಪ್ರತಿಯೊಂದು ಇಲಾಖೆಯ ಹಾಗೂ ಸೊಸೈಟಿಗಳ ಮುಂದೆ ಕಡ್ಡಾಯವಾಗಿ ಗ್ಯಾರಂಟಿ ಸಂಬಂಧಿಸಿದ ಪ್ರಚಾರದ ನಾಮಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರದ ಯೋಜನೆಯಿಂದ ನೇರವಾಗಿ ಪಲಾನುಭವಿಗಳ ಖಾತೆಗೆ ಹಣ ಸೇರುತ್ತೀದೆ ದಲ್ಲಾಳಿಗಳನ್ನು ದೂರ ಇಡಲಾಗಿದೆ ಪ್ರತಿಯೊಂದು ಮಾಹಿತಿ ಸಹ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ದೋಷಗಳು ಇದ್ದರೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಪ್ರತಿ ಇಲಾಖೆಯಿಂದ ಕನಿಷ್ಠ ಐದು ಜನ ಪಲಾನುಭವಿಗಳ ಮಾಹಿತಿ ನೀಡಬೇಕು ಹಣ ವಸೂಲಿ ಅಂತಹ ದೂರು ಬಂದರೆ ಸ್ಥಳದಲ್ಲೇ ಮೇಲಾಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ತಿಳಿಸಿದರು

ಕೋಲಾರ ತಾಲ್ಲೂಕಿನಲ್ಲಿ 85334 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 75453 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು ಕನಿಷ್ಠ 10 ಲಕ್ಷ ಪ್ರಯಾಣಿಕರು ಸಂಚಾರ ಮಾಡಿದ್ದು ಸುಮಾರು 3 ಕೋಟಿಗಿಂತ ಹೆಚ್ಚು ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 108824 ಫಲಾನುಭವಿಗಳು ಇದ್ದು ಯುವ ನಿಧಿಯಲ್ಲಿ 1239 ಮಂದಿ ಅರ್ಜಿ ಸಲ್ಲಿಸಿದ್ದಾರೆ ಉಳಿದ ಪಲಾನುಭವಿಗಳನ್ನು ಗುರಿತಿಸಲು ಪ್ರತಿ ಹಂತದಲ್ಲಿ ಮಾಹಿತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಪಂ ಇಒ ಮಂಜುನಾಥ್, ಸಮಿತಿ ಸದಸ್ಯರಾದ ಅಯೂಬ್ ಖಾನ್, ವಿಜಯಕುಮಾರ್, ಬಾಬು, ಯೂನಿಸ್ ಖಾನ್, ನವೀನ್, ಮಹಮ್ಮದ್ ಇಮ್ರಾನ್, ವಿನೋದ್, ಪುನೀತ್, ಭರತ್, ನಯನಾ ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

5 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

13 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

24 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago