ಗ್ಯಾರೆಂಟಿ ಯೋಜನೆಗಳು ಸೂಕ್ತ ರೀತಿಯಲ್ಲಿ ಜನರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ- ವಿರೋಧಪಕ್ಷದ ನಾಯಕ ಆರ್.ಅಶೋಕ್

ಬಿಜೆಪಿ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಯೋಜನೆ, ಅನುದಾನಗಳನ್ನ ಮುಂದುವರಿಸಿಕೊಂಡು ಹೋದರೆ ಸಾಕು. ಅದನ್ನ ಬಿಟ್ಟು ಎಲ್ಲಾ ಯೋಜನೆಗಳ ಅನುದಾನವನ್ನ ಕಡಿತ ಮಾಡಿದೆ. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಮರಳು ಮಾಡಲಾಗುತ್ತಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನ ಈಡೇರಿಸದೇ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇದಿಯಾ? ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ನಯಾಪೈಸೆ ಲಾಭ ಇಲ್ಲ, ಜನ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡಲಾಗಿದೆ. ನಾನು ಸಾರಿಗೆ ಸಚಿವನಾಗಿದ್ದಾಗ ದೊಡ್ಡಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಭಾಗ್ಯ ಕಲ್ಪಿಸಿಕೊಟ್ಟೆ,‌ ಇಂತಹ ಒಂದೇ ಒಂದು ಸೌಲಭ್ಯವನ್ನ ಈ ತಾಲೂಕಿಗೆ ಕಾಂಗ್ರೆಸ್ ಸರ್ಕಾರ ನೀಡಿದಿಯೇ? ಎಂದು ಪ್ರಶ್ನೆ ಮಾಡಿದರು.

ನಂತರ ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸುವಲ್ಲಿ ಸಂಪೂರ್ಣವಾಗಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಪಕ್ಷ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಭರವಸೆಗಳು ಯಶಸ್ವಿಯಾಗಿ ಜಾರಿಯಾಗುತ್ತಿಲ್ಲ. ತಾಲೂಕು, ಜಿಲ್ಲಾ ಕಚೇರಿ‌ ಸೇರಿದಂತೆ ಎಲ್ಲಾ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ, ವಿದ್ಯುತ್ ಅಭಾವ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ತಾಂಡವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಮ್ಮ ಜಿಲ್ಲೆಯಲ್ಲಿ ರೈತರ ಸಮಸ್ಯೆ ಬಿಗಡಾಯಿಸಿದೆ. ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಕೆಲಸಗಳನ್ನ ಮಾಡುತ್ತಾ ಕಾಲಕಳೆಯುತ್ತಿದೆ. ಸರ್ಕಾರವನ್ನ ಬಡಿದೆಬ್ಬಿಸಲು ಇಂತಹ ಪ್ರತಿಭಟನೆಗಳು ನಿರಂತರವಾಗಿ ನಡೆಸಬೇಕು ಎಂದರು.

ನಂತರ ನೆಲದಾಂಜನೇಯಸ್ವಾಮಿ ದೇವಾಲಯದಿಂದ ತಾಲೂಕು‌ ಕಚೇರಿಯವರೆಗೆ ಮುಖಂಡರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮಾಡುವ ಮೂಲಕ ಜಾಥಾ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

18 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago