ಗ್ಯಾರೆಂಟಿ ಯೋಜನೆಗಳು ಸೂಕ್ತ ರೀತಿಯಲ್ಲಿ ಜನರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ- ವಿರೋಧಪಕ್ಷದ ನಾಯಕ ಆರ್.ಅಶೋಕ್

ಬಿಜೆಪಿ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಯೋಜನೆ, ಅನುದಾನಗಳನ್ನ ಮುಂದುವರಿಸಿಕೊಂಡು ಹೋದರೆ ಸಾಕು. ಅದನ್ನ ಬಿಟ್ಟು ಎಲ್ಲಾ ಯೋಜನೆಗಳ ಅನುದಾನವನ್ನ ಕಡಿತ ಮಾಡಿದೆ. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಮರಳು ಮಾಡಲಾಗುತ್ತಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನ ಈಡೇರಿಸದೇ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇದಿಯಾ? ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ನಯಾಪೈಸೆ ಲಾಭ ಇಲ್ಲ, ಜನ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡಲಾಗಿದೆ. ನಾನು ಸಾರಿಗೆ ಸಚಿವನಾಗಿದ್ದಾಗ ದೊಡ್ಡಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಭಾಗ್ಯ ಕಲ್ಪಿಸಿಕೊಟ್ಟೆ,‌ ಇಂತಹ ಒಂದೇ ಒಂದು ಸೌಲಭ್ಯವನ್ನ ಈ ತಾಲೂಕಿಗೆ ಕಾಂಗ್ರೆಸ್ ಸರ್ಕಾರ ನೀಡಿದಿಯೇ? ಎಂದು ಪ್ರಶ್ನೆ ಮಾಡಿದರು.

ನಂತರ ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸುವಲ್ಲಿ ಸಂಪೂರ್ಣವಾಗಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಪಕ್ಷ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಭರವಸೆಗಳು ಯಶಸ್ವಿಯಾಗಿ ಜಾರಿಯಾಗುತ್ತಿಲ್ಲ. ತಾಲೂಕು, ಜಿಲ್ಲಾ ಕಚೇರಿ‌ ಸೇರಿದಂತೆ ಎಲ್ಲಾ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ, ವಿದ್ಯುತ್ ಅಭಾವ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ತಾಂಡವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಮ್ಮ ಜಿಲ್ಲೆಯಲ್ಲಿ ರೈತರ ಸಮಸ್ಯೆ ಬಿಗಡಾಯಿಸಿದೆ. ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಕೆಲಸಗಳನ್ನ ಮಾಡುತ್ತಾ ಕಾಲಕಳೆಯುತ್ತಿದೆ. ಸರ್ಕಾರವನ್ನ ಬಡಿದೆಬ್ಬಿಸಲು ಇಂತಹ ಪ್ರತಿಭಟನೆಗಳು ನಿರಂತರವಾಗಿ ನಡೆಸಬೇಕು ಎಂದರು.

ನಂತರ ನೆಲದಾಂಜನೇಯಸ್ವಾಮಿ ದೇವಾಲಯದಿಂದ ತಾಲೂಕು‌ ಕಚೇರಿಯವರೆಗೆ ಮುಖಂಡರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮಾಡುವ ಮೂಲಕ ಜಾಥಾ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

4 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

17 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

17 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

17 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

17 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

20 hours ago