Categories: ಕೋಲಾರ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಅಸ್ತಿತ್ವಕ್ಕೆ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ನಿಮ್ಮ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು,

ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಛೇರಿ ಉದ್ವಾಟನೆ ಹಾಗೂ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಿತಿ ಸದಸ್ಯರು ಎಸಿ ಕಛೇರಿಯಲ್ಲಿ ಕಾಲಕಳೆಯಲು ಅಧಿಕಾರ ಕೊಟ್ಟಿಲ್ಲ ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು ಎಂದರು.

ರಾಜ್ಯದಲ್ಲಿ ಹಸಿದವರಿಗೆ ಗ್ಯಾರಂಟಿ ಯೋಜನೆಗಳ ಬೆಲೆ ಗೊತ್ತಾಗುತ್ತದೆ ವಿರೋಧ ಪಕ್ಷದವರಿಗೆ ಏನು ಗೊತ್ತಿದೆ ರಾಜ್ಯದಲ್ಲಿ ವಿರೋಧ ಪಕ್ಷವು ಬರೀ ಜಾತಿ ಜನಾಂಗಗಳ ನಡುವೆ ಗಲಾಟೆ ಮಾಡಿ ರಾಜಕಾರಣ ಮಾಡಲು ಹೊರಟಿದ್ದಾರೆ ಆಡಳಿತ ಪಕ್ಷದವರಿಂದ ಜನತೆಗೆ ಯಾವುದೇ ಯೋಜನೆಗಳಿಲ್ಲ ಅನುದಾನ ಕೊಡಲು ಹಣ ಇಲ್ಲ ಎಂದು ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಹೊರಟಿದ್ದಾರೆ ಬಡವರಿಗೆ ಜನಪರ ಯೋಜನೆಗಳನ್ನು ಕೊಡಲು ಅವರಿಗೆ ಯೋಗ್ಯತೆ ಇಲ್ಲ ಬರಿ ಆಡಳಿತ ಪಕ್ಷದ ಗೂಬೆ ಕೂರಿಸುವ ಕೆಲಸ ಮಾಡತ್ತಾರೆ ಎಂದು ಆರೋಪಿಸಿದರು

ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 56 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಸರಕಾರವು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಾ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಿದ್ದಾರೆ ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರಕಾರವು ಜನಪರ ಯೋಜನೆಗಳ ಅನುಷ್ಠಾನ ಮಾಡಲು ಸಮಿತಿಯನ್ನು ನೇಮಿಸಿದ್ದು ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಅಂಕಿಅಂಶಗಳನ್ನು ಸಂಗ್ರಹಿಸಿ ಪ್ರತಿಯೊಬ್ಬರನ್ನೂ ಯೋಜನೆಯ ಫಲಾನುಭವಿಗಳಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾಧಿಕಾರಿ ಅಕ್ರಂ ಪಾಷ ಅಪರ ಜಿಲ್ಲಾಧಿಕಾರಿ ಮಂಗಳ, ತಹಶಿಲ್ದಾರ್ ಎಂ.ನಯನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಕೆ.ವಿ ಗೌತಮ್, ನಾಗನಾಳ ಸೋಮಣ್ಣ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಹನೀಫ್, ಗದ್ದೆಕಣ್ಣೂರು ದಯಾನಂದ್, ಮುರಳಿಗೌಡ, ಸೇರಿದಂತೆ ಸಮಿತಿ ಉಪಾಧ್ಯಕ್ಷರು ಸದಸ್ಯರು ಇದ್ದರು,

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

2 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

2 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

9 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

10 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

21 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago