Categories: ಕೋಲಾರ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಅಸ್ತಿತ್ವಕ್ಕೆ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ನಿಮ್ಮ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು,

ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಛೇರಿ ಉದ್ವಾಟನೆ ಹಾಗೂ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಿತಿ ಸದಸ್ಯರು ಎಸಿ ಕಛೇರಿಯಲ್ಲಿ ಕಾಲಕಳೆಯಲು ಅಧಿಕಾರ ಕೊಟ್ಟಿಲ್ಲ ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು ಎಂದರು.

ರಾಜ್ಯದಲ್ಲಿ ಹಸಿದವರಿಗೆ ಗ್ಯಾರಂಟಿ ಯೋಜನೆಗಳ ಬೆಲೆ ಗೊತ್ತಾಗುತ್ತದೆ ವಿರೋಧ ಪಕ್ಷದವರಿಗೆ ಏನು ಗೊತ್ತಿದೆ ರಾಜ್ಯದಲ್ಲಿ ವಿರೋಧ ಪಕ್ಷವು ಬರೀ ಜಾತಿ ಜನಾಂಗಗಳ ನಡುವೆ ಗಲಾಟೆ ಮಾಡಿ ರಾಜಕಾರಣ ಮಾಡಲು ಹೊರಟಿದ್ದಾರೆ ಆಡಳಿತ ಪಕ್ಷದವರಿಂದ ಜನತೆಗೆ ಯಾವುದೇ ಯೋಜನೆಗಳಿಲ್ಲ ಅನುದಾನ ಕೊಡಲು ಹಣ ಇಲ್ಲ ಎಂದು ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಹೊರಟಿದ್ದಾರೆ ಬಡವರಿಗೆ ಜನಪರ ಯೋಜನೆಗಳನ್ನು ಕೊಡಲು ಅವರಿಗೆ ಯೋಗ್ಯತೆ ಇಲ್ಲ ಬರಿ ಆಡಳಿತ ಪಕ್ಷದ ಗೂಬೆ ಕೂರಿಸುವ ಕೆಲಸ ಮಾಡತ್ತಾರೆ ಎಂದು ಆರೋಪಿಸಿದರು

ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 56 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಸರಕಾರವು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಾ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಿದ್ದಾರೆ ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರಕಾರವು ಜನಪರ ಯೋಜನೆಗಳ ಅನುಷ್ಠಾನ ಮಾಡಲು ಸಮಿತಿಯನ್ನು ನೇಮಿಸಿದ್ದು ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಅಂಕಿಅಂಶಗಳನ್ನು ಸಂಗ್ರಹಿಸಿ ಪ್ರತಿಯೊಬ್ಬರನ್ನೂ ಯೋಜನೆಯ ಫಲಾನುಭವಿಗಳಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾಧಿಕಾರಿ ಅಕ್ರಂ ಪಾಷ ಅಪರ ಜಿಲ್ಲಾಧಿಕಾರಿ ಮಂಗಳ, ತಹಶಿಲ್ದಾರ್ ಎಂ.ನಯನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಕೆ.ವಿ ಗೌತಮ್, ನಾಗನಾಳ ಸೋಮಣ್ಣ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಹನೀಫ್, ಗದ್ದೆಕಣ್ಣೂರು ದಯಾನಂದ್, ಮುರಳಿಗೌಡ, ಸೇರಿದಂತೆ ಸಮಿತಿ ಉಪಾಧ್ಯಕ್ಷರು ಸದಸ್ಯರು ಇದ್ದರು,

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago