Categories: ಕೋಲಾರ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಅಸ್ತಿತ್ವಕ್ಕೆ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ನಿಮ್ಮ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು,

ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಛೇರಿ ಉದ್ವಾಟನೆ ಹಾಗೂ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಿತಿ ಸದಸ್ಯರು ಎಸಿ ಕಛೇರಿಯಲ್ಲಿ ಕಾಲಕಳೆಯಲು ಅಧಿಕಾರ ಕೊಟ್ಟಿಲ್ಲ ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು ಎಂದರು.

ರಾಜ್ಯದಲ್ಲಿ ಹಸಿದವರಿಗೆ ಗ್ಯಾರಂಟಿ ಯೋಜನೆಗಳ ಬೆಲೆ ಗೊತ್ತಾಗುತ್ತದೆ ವಿರೋಧ ಪಕ್ಷದವರಿಗೆ ಏನು ಗೊತ್ತಿದೆ ರಾಜ್ಯದಲ್ಲಿ ವಿರೋಧ ಪಕ್ಷವು ಬರೀ ಜಾತಿ ಜನಾಂಗಗಳ ನಡುವೆ ಗಲಾಟೆ ಮಾಡಿ ರಾಜಕಾರಣ ಮಾಡಲು ಹೊರಟಿದ್ದಾರೆ ಆಡಳಿತ ಪಕ್ಷದವರಿಂದ ಜನತೆಗೆ ಯಾವುದೇ ಯೋಜನೆಗಳಿಲ್ಲ ಅನುದಾನ ಕೊಡಲು ಹಣ ಇಲ್ಲ ಎಂದು ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಹೊರಟಿದ್ದಾರೆ ಬಡವರಿಗೆ ಜನಪರ ಯೋಜನೆಗಳನ್ನು ಕೊಡಲು ಅವರಿಗೆ ಯೋಗ್ಯತೆ ಇಲ್ಲ ಬರಿ ಆಡಳಿತ ಪಕ್ಷದ ಗೂಬೆ ಕೂರಿಸುವ ಕೆಲಸ ಮಾಡತ್ತಾರೆ ಎಂದು ಆರೋಪಿಸಿದರು

ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 56 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಸರಕಾರವು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಾ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಿದ್ದಾರೆ ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರಕಾರವು ಜನಪರ ಯೋಜನೆಗಳ ಅನುಷ್ಠಾನ ಮಾಡಲು ಸಮಿತಿಯನ್ನು ನೇಮಿಸಿದ್ದು ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಅಂಕಿಅಂಶಗಳನ್ನು ಸಂಗ್ರಹಿಸಿ ಪ್ರತಿಯೊಬ್ಬರನ್ನೂ ಯೋಜನೆಯ ಫಲಾನುಭವಿಗಳಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾಧಿಕಾರಿ ಅಕ್ರಂ ಪಾಷ ಅಪರ ಜಿಲ್ಲಾಧಿಕಾರಿ ಮಂಗಳ, ತಹಶಿಲ್ದಾರ್ ಎಂ.ನಯನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಕೆ.ವಿ ಗೌತಮ್, ನಾಗನಾಳ ಸೋಮಣ್ಣ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಹನೀಫ್, ಗದ್ದೆಕಣ್ಣೂರು ದಯಾನಂದ್, ಮುರಳಿಗೌಡ, ಸೇರಿದಂತೆ ಸಮಿತಿ ಉಪಾಧ್ಯಕ್ಷರು ಸದಸ್ಯರು ಇದ್ದರು,

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

6 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

16 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

19 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

24 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

1 day ago