ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ನಿಮ್ಮ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು,
ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಛೇರಿ ಉದ್ವಾಟನೆ ಹಾಗೂ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಿತಿ ಸದಸ್ಯರು ಎಸಿ ಕಛೇರಿಯಲ್ಲಿ ಕಾಲಕಳೆಯಲು ಅಧಿಕಾರ ಕೊಟ್ಟಿಲ್ಲ ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು ಎಂದರು.
ರಾಜ್ಯದಲ್ಲಿ ಹಸಿದವರಿಗೆ ಗ್ಯಾರಂಟಿ ಯೋಜನೆಗಳ ಬೆಲೆ ಗೊತ್ತಾಗುತ್ತದೆ ವಿರೋಧ ಪಕ್ಷದವರಿಗೆ ಏನು ಗೊತ್ತಿದೆ ರಾಜ್ಯದಲ್ಲಿ ವಿರೋಧ ಪಕ್ಷವು ಬರೀ ಜಾತಿ ಜನಾಂಗಗಳ ನಡುವೆ ಗಲಾಟೆ ಮಾಡಿ ರಾಜಕಾರಣ ಮಾಡಲು ಹೊರಟಿದ್ದಾರೆ ಆಡಳಿತ ಪಕ್ಷದವರಿಂದ ಜನತೆಗೆ ಯಾವುದೇ ಯೋಜನೆಗಳಿಲ್ಲ ಅನುದಾನ ಕೊಡಲು ಹಣ ಇಲ್ಲ ಎಂದು ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಹೊರಟಿದ್ದಾರೆ ಬಡವರಿಗೆ ಜನಪರ ಯೋಜನೆಗಳನ್ನು ಕೊಡಲು ಅವರಿಗೆ ಯೋಗ್ಯತೆ ಇಲ್ಲ ಬರಿ ಆಡಳಿತ ಪಕ್ಷದ ಗೂಬೆ ಕೂರಿಸುವ ಕೆಲಸ ಮಾಡತ್ತಾರೆ ಎಂದು ಆರೋಪಿಸಿದರು
ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 56 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಸರಕಾರವು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಾ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಿದ್ದಾರೆ ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರಕಾರವು ಜನಪರ ಯೋಜನೆಗಳ ಅನುಷ್ಠಾನ ಮಾಡಲು ಸಮಿತಿಯನ್ನು ನೇಮಿಸಿದ್ದು ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಅಂಕಿಅಂಶಗಳನ್ನು ಸಂಗ್ರಹಿಸಿ ಪ್ರತಿಯೊಬ್ಬರನ್ನೂ ಯೋಜನೆಯ ಫಲಾನುಭವಿಗಳಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾಧಿಕಾರಿ ಅಕ್ರಂ ಪಾಷ ಅಪರ ಜಿಲ್ಲಾಧಿಕಾರಿ ಮಂಗಳ, ತಹಶಿಲ್ದಾರ್ ಎಂ.ನಯನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಕೆ.ವಿ ಗೌತಮ್, ನಾಗನಾಳ ಸೋಮಣ್ಣ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಹನೀಫ್, ಗದ್ದೆಕಣ್ಣೂರು ದಯಾನಂದ್, ಮುರಳಿಗೌಡ, ಸೇರಿದಂತೆ ಸಮಿತಿ ಉಪಾಧ್ಯಕ್ಷರು ಸದಸ್ಯರು ಇದ್ದರು,
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…