ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಪತಿ ಸಾವು: ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು: ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಉಲ್ಲೇಖ

ನೆಲಮಂಗಲದಲ್ಲೋಂದು ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಗಂಡ ಸಾವಿನ ಬೆನ್ನಲ್ಲೆ ಮನನೊಂದು ಹೆಂಡತಿ‌ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ ರಾಜು, ಪತ್ನಿ ಮೀನಾ ಮೃತಪಟ್ಟ ದಂಪತಿ.

ಮೂಲತಃ ಕುಣಿಗಲ್ ನಿವಾಸಿಗಳಾದ ದಂಪತಿ 20 ವರ್ಷದ ಹಿಂದೆ ಮದುವೆಯಾಗಿ ನೆಲಮಂಗಲದ ಜಕ್ಕಸಂದ್ರದಲ್ಲಿ ಮನೆ ಲೀಸ್ ಪಡೆದು ವಾಸವಾಗಿದ್ದರು.

ಗಂಡನ ಶವದ ಮುಖ ಕೂಡ ನೋಡದೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ ಸ್ನಾನ ಮಾಡಲು ಬಾತ್ ರೂಂ ಗೆ ತೆರಳಿದ್ದ ಪತಿ ರಾಜು, ಈ ವೇಳೆ ಗ್ಯಾಸ್ ಗೀಸರ್ ಎಡವಟ್ಟಿನಿಂದ ಸಾವನ್ನಪ್ಪಿದ್ದ.

ಒಂದು ಗಂಟೆಯಾದ್ರೂ ಬಾತ್ ರೂಂ ನಿಂದ ಹೊರ ಬಾರದ ಹಿನ್ನೆಲೆ, ಮಗ ಡೋರ್ ಒಡೆದು ನೋಡಿದಾಗ ಕುಸಿದು ಬಿದ್ದಿದ್ದ. ಮಗ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದು ವೈದ್ಯರು ದೃಢಪಡಿಸಿದ್ದಾರೆ.

ಈ ಹಿನ್ನೆಲೆ ತಂದೆ ಸಾವನ್ನಪ್ಪಿರುವುದನ್ನ ತನ್ನ ತಾಯಿ‌ ಮೀನಾಗೆ ಮಗ ತಿಳಿಸಿದ್ದಾನೆ. ಆಗ ಮೃತನ ಹೆಂಡತಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್ ನೋಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡಬೇಕು ಅದೆಲ್ಲವನ್ನ ಕೊಟ್ಟುಬಿಡಿ, ನನ್ನ ಕ್ಷಮಿಸಿಬಿಡಿ ಎಂದು ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಗಂಡ ಹೆಂಡತಿ ಮೃತ ದೇಹ ನೆಲಮಂಗಲ ಸರ್ಕಾರಿ ಶವಗಾರದಲ್ಲಿ ದಲ್ಲಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಈ ವೇಳೆ ದಂಪತಿಗಳ ಮೃತ ದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

1 hour ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

5 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

5 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

10 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

12 hours ago