ನೆಲಮಂಗಲದಲ್ಲೋಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಗಂಡ ಸಾವಿನ ಬೆನ್ನಲ್ಲೆ ಮನನೊಂದು ಹೆಂಡತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ ರಾಜು, ಪತ್ನಿ ಮೀನಾ ಮೃತಪಟ್ಟ ದಂಪತಿ.
ಮೂಲತಃ ಕುಣಿಗಲ್ ನಿವಾಸಿಗಳಾದ ದಂಪತಿ 20 ವರ್ಷದ ಹಿಂದೆ ಮದುವೆಯಾಗಿ ನೆಲಮಂಗಲದ ಜಕ್ಕಸಂದ್ರದಲ್ಲಿ ಮನೆ ಲೀಸ್ ಪಡೆದು ವಾಸವಾಗಿದ್ದರು.
ಗಂಡನ ಶವದ ಮುಖ ಕೂಡ ನೋಡದೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಸಂಜೆ ಸ್ನಾನ ಮಾಡಲು ಬಾತ್ ರೂಂ ಗೆ ತೆರಳಿದ್ದ ಪತಿ ರಾಜು, ಈ ವೇಳೆ ಗ್ಯಾಸ್ ಗೀಸರ್ ಎಡವಟ್ಟಿನಿಂದ ಸಾವನ್ನಪ್ಪಿದ್ದ.
ಒಂದು ಗಂಟೆಯಾದ್ರೂ ಬಾತ್ ರೂಂ ನಿಂದ ಹೊರ ಬಾರದ ಹಿನ್ನೆಲೆ, ಮಗ ಡೋರ್ ಒಡೆದು ನೋಡಿದಾಗ ಕುಸಿದು ಬಿದ್ದಿದ್ದ. ಮಗ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದು ವೈದ್ಯರು ದೃಢಪಡಿಸಿದ್ದಾರೆ.
ಈ ಹಿನ್ನೆಲೆ ತಂದೆ ಸಾವನ್ನಪ್ಪಿರುವುದನ್ನ ತನ್ನ ತಾಯಿ ಮೀನಾಗೆ ಮಗ ತಿಳಿಸಿದ್ದಾನೆ. ಆಗ ಮೃತನ ಹೆಂಡತಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.
ಡೆತ್ ನೋಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡಬೇಕು ಅದೆಲ್ಲವನ್ನ ಕೊಟ್ಟುಬಿಡಿ, ನನ್ನ ಕ್ಷಮಿಸಿಬಿಡಿ ಎಂದು ಉಲ್ಲೇಖಿಸಿದ್ದಾರೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಗಂಡ ಹೆಂಡತಿ ಮೃತ ದೇಹ ನೆಲಮಂಗಲ ಸರ್ಕಾರಿ ಶವಗಾರದಲ್ಲಿ ದಲ್ಲಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಈ ವೇಳೆ ದಂಪತಿಗಳ ಮೃತ ದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…