ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಪತಿ ಸಾವು: ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು: ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಉಲ್ಲೇಖ

ನೆಲಮಂಗಲದಲ್ಲೋಂದು ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಗಂಡ ಸಾವಿನ ಬೆನ್ನಲ್ಲೆ ಮನನೊಂದು ಹೆಂಡತಿ‌ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ ರಾಜು, ಪತ್ನಿ ಮೀನಾ ಮೃತಪಟ್ಟ ದಂಪತಿ.

ಮೂಲತಃ ಕುಣಿಗಲ್ ನಿವಾಸಿಗಳಾದ ದಂಪತಿ 20 ವರ್ಷದ ಹಿಂದೆ ಮದುವೆಯಾಗಿ ನೆಲಮಂಗಲದ ಜಕ್ಕಸಂದ್ರದಲ್ಲಿ ಮನೆ ಲೀಸ್ ಪಡೆದು ವಾಸವಾಗಿದ್ದರು.

ಗಂಡನ ಶವದ ಮುಖ ಕೂಡ ನೋಡದೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ ಸ್ನಾನ ಮಾಡಲು ಬಾತ್ ರೂಂ ಗೆ ತೆರಳಿದ್ದ ಪತಿ ರಾಜು, ಈ ವೇಳೆ ಗ್ಯಾಸ್ ಗೀಸರ್ ಎಡವಟ್ಟಿನಿಂದ ಸಾವನ್ನಪ್ಪಿದ್ದ.

ಒಂದು ಗಂಟೆಯಾದ್ರೂ ಬಾತ್ ರೂಂ ನಿಂದ ಹೊರ ಬಾರದ ಹಿನ್ನೆಲೆ, ಮಗ ಡೋರ್ ಒಡೆದು ನೋಡಿದಾಗ ಕುಸಿದು ಬಿದ್ದಿದ್ದ. ಮಗ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದು ವೈದ್ಯರು ದೃಢಪಡಿಸಿದ್ದಾರೆ.

ಈ ಹಿನ್ನೆಲೆ ತಂದೆ ಸಾವನ್ನಪ್ಪಿರುವುದನ್ನ ತನ್ನ ತಾಯಿ‌ ಮೀನಾಗೆ ಮಗ ತಿಳಿಸಿದ್ದಾನೆ. ಆಗ ಮೃತನ ಹೆಂಡತಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್ ನೋಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡಬೇಕು ಅದೆಲ್ಲವನ್ನ ಕೊಟ್ಟುಬಿಡಿ, ನನ್ನ ಕ್ಷಮಿಸಿಬಿಡಿ ಎಂದು ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಗಂಡ ಹೆಂಡತಿ ಮೃತ ದೇಹ ನೆಲಮಂಗಲ ಸರ್ಕಾರಿ ಶವಗಾರದಲ್ಲಿ ದಲ್ಲಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಈ ವೇಳೆ ದಂಪತಿಗಳ ಮೃತ ದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

7 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago