ಗ್ಯಾಸ್ ತುಂಬಿಸುವ ವೇಳೆ ಆಕಸ್ಮಿಕ ಬೆಂಕಿ ಅವಘಡ: ಸುಟ್ಟು ಕರಕಲಾದ ಆಟೋ: ಕಣ್ಣೀರಿಟ್ಟ ಆಟೋ ಡ್ರೈವರ್

ನಗರದ ಜಿ.ರಾಮೇಗೌಡ ವೃತ್ತದ ಸಮೀಪ ಇರುವ ಆಟೋ ಗ್ಯಾಸ್ ಬಂಕ್ ಬಳಿ ಗ್ಯಾಸ್ ಫಿಲ್ ಮಾಡಿಸುವ ವೇಳೆ ಆಟೋ ಇಂಜಿನ್ ಬಿಸಿಯಾಗಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ. ಬೆಂಕಿ ನಂದಿಸುವಷ್ಟರಲ್ಲಿ ಸಂಪೂರ್ಣ ಸುಟ್ಟುಕರಕಲಾದ ಆಟೋ. ಆಟೋ ಡ್ರೈವರ್ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಆಟೋ ಮಾಲೀಕ. ಬಿಎಂಟಿಸಿ ಬಸ್ ಚಾಲಕನಾಗಿದ್ದ ಶಿವಕುಮಾರ್. ಆರನೇ ವೇತನ ಆಯೋಗ ಜಾರಿಗಾಗಿ ಪ್ರತಿಭಟನೆ ನಡೆಸುವ ವೇಳೆ ಕೆಲಸದಿಂದ ವಜಾಗೊಳಿಸಿದ್ದರಿಂದ ಜೀವನ ಆಧಾರಕ್ಕಾಗಿ ಸೆಕೆಂಡ್ ಹ್ಯಾಂಡ್ ಆಗಿ ಒಂದು ವರ್ಷದಿಂದೆ ಗ್ಯಾಸ್ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿದೆ ಎಂದು ಆಟೋ ಮಾಲೀಕ ಶಿವಕುಮಾರ್ ಹೇಳಿದರು.

ಇಂದು ದೂರದ ಊರಿಗೆ ಬಾಡಿಗೆ ಹೋಗಿದ್ದೆ, ಗ್ಯಾಸ್ ಕಡಿಮೆ ಆಗಿದ್ದರಿಂದ ಗ್ಯಾಸ್ ಫಿಲ್ ಮಾಡಿಸಲೆಂದು ಬಂದಾಗ ಇಂಜಿನ್ ಬಿಸಿಯಾಗಿ ಕಿಡಿ ಹೊತ್ತಿ ಉರಿದಿದೆ.

ಗ್ಯಾಸ್ ತುಂಬಿಸಿ ರಸ್ತೆಗೆ ಬಂದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ಪ್ರಯಾಣಿಕರು ಸಹ ಇದ್ದರು, ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿನಂದಿಸುವ ಕಾರ್ಯ ಮಾಡಿದೆ. ಆದರೂ ಬೆಂಕಿ ಕೆನ್ನಾಲಿಗೆಗೆ ಆಟೋ ಸುಟ್ಟು ಭಸ್ಮವಾಗಿದೆ. ಜೀವನ ನಡೆಸಲು ಇದ್ದ ಆಟೋ ಕಳೆದುಕೊಂಡಿದ್ದೇನೆ ಈಗ ನನಗೆ ದಿಕ್ಕು ತೋಚದಂತೆ ಆಗಿದೆ ಎಂದು ಕಣ್ಣೀರಿಟ್ಟು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago