ಗ್ಯಾಸ್ ತುಂಬಿಸುವ ವೇಳೆ ಆಕಸ್ಮಿಕ ಬೆಂಕಿ ಅವಘಡ: ಸುಟ್ಟು ಕರಕಲಾದ ಆಟೋ: ಕಣ್ಣೀರಿಟ್ಟ ಆಟೋ ಡ್ರೈವರ್

ನಗರದ ಜಿ.ರಾಮೇಗೌಡ ವೃತ್ತದ ಸಮೀಪ ಇರುವ ಆಟೋ ಗ್ಯಾಸ್ ಬಂಕ್ ಬಳಿ ಗ್ಯಾಸ್ ಫಿಲ್ ಮಾಡಿಸುವ ವೇಳೆ ಆಟೋ ಇಂಜಿನ್ ಬಿಸಿಯಾಗಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ. ಬೆಂಕಿ ನಂದಿಸುವಷ್ಟರಲ್ಲಿ ಸಂಪೂರ್ಣ ಸುಟ್ಟುಕರಕಲಾದ ಆಟೋ. ಆಟೋ ಡ್ರೈವರ್ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಆಟೋ ಮಾಲೀಕ. ಬಿಎಂಟಿಸಿ ಬಸ್ ಚಾಲಕನಾಗಿದ್ದ ಶಿವಕುಮಾರ್. ಆರನೇ ವೇತನ ಆಯೋಗ ಜಾರಿಗಾಗಿ ಪ್ರತಿಭಟನೆ ನಡೆಸುವ ವೇಳೆ ಕೆಲಸದಿಂದ ವಜಾಗೊಳಿಸಿದ್ದರಿಂದ ಜೀವನ ಆಧಾರಕ್ಕಾಗಿ ಸೆಕೆಂಡ್ ಹ್ಯಾಂಡ್ ಆಗಿ ಒಂದು ವರ್ಷದಿಂದೆ ಗ್ಯಾಸ್ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿದೆ ಎಂದು ಆಟೋ ಮಾಲೀಕ ಶಿವಕುಮಾರ್ ಹೇಳಿದರು.

ಇಂದು ದೂರದ ಊರಿಗೆ ಬಾಡಿಗೆ ಹೋಗಿದ್ದೆ, ಗ್ಯಾಸ್ ಕಡಿಮೆ ಆಗಿದ್ದರಿಂದ ಗ್ಯಾಸ್ ಫಿಲ್ ಮಾಡಿಸಲೆಂದು ಬಂದಾಗ ಇಂಜಿನ್ ಬಿಸಿಯಾಗಿ ಕಿಡಿ ಹೊತ್ತಿ ಉರಿದಿದೆ.

ಗ್ಯಾಸ್ ತುಂಬಿಸಿ ರಸ್ತೆಗೆ ಬಂದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ಪ್ರಯಾಣಿಕರು ಸಹ ಇದ್ದರು, ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿನಂದಿಸುವ ಕಾರ್ಯ ಮಾಡಿದೆ. ಆದರೂ ಬೆಂಕಿ ಕೆನ್ನಾಲಿಗೆಗೆ ಆಟೋ ಸುಟ್ಟು ಭಸ್ಮವಾಗಿದೆ. ಜೀವನ ನಡೆಸಲು ಇದ್ದ ಆಟೋ ಕಳೆದುಕೊಂಡಿದ್ದೇನೆ ಈಗ ನನಗೆ ದಿಕ್ಕು ತೋಚದಂತೆ ಆಗಿದೆ ಎಂದು ಕಣ್ಣೀರಿಟ್ಟು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

6 minutes ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

16 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

16 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago