ಗ್ಯಾಸ್ ತುಂಬಿಸುವ ವೇಳೆ ಆಕಸ್ಮಿಕ ಬೆಂಕಿ ಅವಘಡ: ಸುಟ್ಟು ಕರಕಲಾದ ಆಟೋ: ಕಣ್ಣೀರಿಟ್ಟ ಆಟೋ ಡ್ರೈವರ್

ನಗರದ ಜಿ.ರಾಮೇಗೌಡ ವೃತ್ತದ ಸಮೀಪ ಇರುವ ಆಟೋ ಗ್ಯಾಸ್ ಬಂಕ್ ಬಳಿ ಗ್ಯಾಸ್ ಫಿಲ್ ಮಾಡಿಸುವ ವೇಳೆ ಆಟೋ ಇಂಜಿನ್ ಬಿಸಿಯಾಗಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ. ಬೆಂಕಿ ನಂದಿಸುವಷ್ಟರಲ್ಲಿ ಸಂಪೂರ್ಣ ಸುಟ್ಟುಕರಕಲಾದ ಆಟೋ. ಆಟೋ ಡ್ರೈವರ್ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಆಟೋ ಮಾಲೀಕ. ಬಿಎಂಟಿಸಿ ಬಸ್ ಚಾಲಕನಾಗಿದ್ದ ಶಿವಕುಮಾರ್. ಆರನೇ ವೇತನ ಆಯೋಗ ಜಾರಿಗಾಗಿ ಪ್ರತಿಭಟನೆ ನಡೆಸುವ ವೇಳೆ ಕೆಲಸದಿಂದ ವಜಾಗೊಳಿಸಿದ್ದರಿಂದ ಜೀವನ ಆಧಾರಕ್ಕಾಗಿ ಸೆಕೆಂಡ್ ಹ್ಯಾಂಡ್ ಆಗಿ ಒಂದು ವರ್ಷದಿಂದೆ ಗ್ಯಾಸ್ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿದೆ ಎಂದು ಆಟೋ ಮಾಲೀಕ ಶಿವಕುಮಾರ್ ಹೇಳಿದರು.

ಇಂದು ದೂರದ ಊರಿಗೆ ಬಾಡಿಗೆ ಹೋಗಿದ್ದೆ, ಗ್ಯಾಸ್ ಕಡಿಮೆ ಆಗಿದ್ದರಿಂದ ಗ್ಯಾಸ್ ಫಿಲ್ ಮಾಡಿಸಲೆಂದು ಬಂದಾಗ ಇಂಜಿನ್ ಬಿಸಿಯಾಗಿ ಕಿಡಿ ಹೊತ್ತಿ ಉರಿದಿದೆ.

ಗ್ಯಾಸ್ ತುಂಬಿಸಿ ರಸ್ತೆಗೆ ಬಂದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ಪ್ರಯಾಣಿಕರು ಸಹ ಇದ್ದರು, ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿನಂದಿಸುವ ಕಾರ್ಯ ಮಾಡಿದೆ. ಆದರೂ ಬೆಂಕಿ ಕೆನ್ನಾಲಿಗೆಗೆ ಆಟೋ ಸುಟ್ಟು ಭಸ್ಮವಾಗಿದೆ. ಜೀವನ ನಡೆಸಲು ಇದ್ದ ಆಟೋ ಕಳೆದುಕೊಂಡಿದ್ದೇನೆ ಈಗ ನನಗೆ ದಿಕ್ಕು ತೋಚದಂತೆ ಆಗಿದೆ ಎಂದು ಕಣ್ಣೀರಿಟ್ಟು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

1 hour ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

4 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

19 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

23 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

24 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago