ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸಿ-ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕ ಶ್ರೇಯಸ್

ದೇವನಹಳ್ಳಿ: ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿರುವುದನ್ನು ಸದುಉಪಯೋಗಪಡಿಸಿಕೊಳ್ಳಿ ಹಾಗೂ ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸುವುದು ಬಹುಮುಖ್ಯ ಎಂದು ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಾದ ಶ್ರೇಯಸ್ ಮಾಹಿತಿ ನೀಡಿದರು.

ದೇವನಹಳ್ಳಿ ಪಟ್ಟಣದಲ್ಲಿರುವ ಎಸ್ಎಲ್ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ (PMUY)ಉಚಿತ ಗ್ಯಾಸ್ ಮತ್ತು ಗ್ಯಾಸ್ ಸ್ಟೌವ್ ಸೌಲಭ್ಯ ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ, ಮಾತನಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ .ವಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ‌ ಮೋದಿಯವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿತ್ವ ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೇವಲ ನಾಮಾಕವಸ್ಥೆಗೆ ಕೆಲವರಿಗೆ ತಲುಪಿಸಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಯೋಜನೆಗಳನ್ನು ತಲುಪಿಸಿಲ್ಲ,ಕಟ್ಟಿಗೆ ಓಲೆಯಲ್ಲಿ ಅಡುಗೆ ಮಾಡುವಾಗ ಮಹಿಳೆಯರಿಗೆ ಟಿಬಿ, ಕ್ಷಯ ಮತ್ತು ಶ್ವಾಸಕೋಶದ ಅನಾರೋಗ್ಯ ತೊಂದರೆ ತಪ್ಪಿಸಿ ಮಹಿಳೆಯರ ಅರೋಗ್ಯ ರಕ್ಷಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಬಿಜೆಪಿ ಮುಖಂಡ ಮತ್ತು ಕೊರಮ ಸಮುದಾಯದ ಅಧ್ಯಕ್ಷ ಎಕೆಪಿ ನಾಗೇಶ್ ಮಾತನಾಡಿ ಮೋದಿಯವರ ಯೋಜನೆಗಳು ಪ್ರತಿಯೊಬ್ಬ ಬಡವನಿಗೂ ತಲುಪುವ ಯೋಜನೆಗಳು ಅದು ಬಿಜೆಪಿಯ ಸಾಧನೆ, ದೇಶದ ಎಲ್ಲಾ ನಾಗರೀಕರಿಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯಾಭ್ಯಾಸ ನೀಡುವ ಸದುದ್ದೇಶ ಹೊಂದಿದ್ದಾರೆ.
ಅವರ ಆಡಳಿತದಲ್ಲಿ ಪಾರದರ್ಶಕತೆ ಹೊಂದಿದೆ ಹಾಗಾಗಿ ಮುಂಬರುವ ಚುನಾವಣೆಯಲ್ಲೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ‌ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರವಿಕುಮಾರ್.ಎಚ್, ಜಿಲ್ಲಾಧ್ಯಕ್ಷ ಶಿವಪ್ರಸಾದ್ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಮುಖಂಡರಾದ ಎಸ್ಎಲ್ಎನ್ ಅಶ್ವಥ್ ನಾರಾಯಣ್ ತಾಲೂಕು ಅಧ್ಯಕ್ಷ ಸುನಿಲ್ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಮತ್ತಿತರರು ಇದ್ದರು.

Ramesh Babu

Journalist

Recent Posts

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

42 minutes ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

3 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

9 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

19 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

19 hours ago