ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸಿ-ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕ ಶ್ರೇಯಸ್

ದೇವನಹಳ್ಳಿ: ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿರುವುದನ್ನು ಸದುಉಪಯೋಗಪಡಿಸಿಕೊಳ್ಳಿ ಹಾಗೂ ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸುವುದು ಬಹುಮುಖ್ಯ ಎಂದು ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಾದ ಶ್ರೇಯಸ್ ಮಾಹಿತಿ ನೀಡಿದರು.

ದೇವನಹಳ್ಳಿ ಪಟ್ಟಣದಲ್ಲಿರುವ ಎಸ್ಎಲ್ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ (PMUY)ಉಚಿತ ಗ್ಯಾಸ್ ಮತ್ತು ಗ್ಯಾಸ್ ಸ್ಟೌವ್ ಸೌಲಭ್ಯ ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ, ಮಾತನಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ .ವಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ‌ ಮೋದಿಯವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿತ್ವ ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೇವಲ ನಾಮಾಕವಸ್ಥೆಗೆ ಕೆಲವರಿಗೆ ತಲುಪಿಸಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಯೋಜನೆಗಳನ್ನು ತಲುಪಿಸಿಲ್ಲ,ಕಟ್ಟಿಗೆ ಓಲೆಯಲ್ಲಿ ಅಡುಗೆ ಮಾಡುವಾಗ ಮಹಿಳೆಯರಿಗೆ ಟಿಬಿ, ಕ್ಷಯ ಮತ್ತು ಶ್ವಾಸಕೋಶದ ಅನಾರೋಗ್ಯ ತೊಂದರೆ ತಪ್ಪಿಸಿ ಮಹಿಳೆಯರ ಅರೋಗ್ಯ ರಕ್ಷಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಬಿಜೆಪಿ ಮುಖಂಡ ಮತ್ತು ಕೊರಮ ಸಮುದಾಯದ ಅಧ್ಯಕ್ಷ ಎಕೆಪಿ ನಾಗೇಶ್ ಮಾತನಾಡಿ ಮೋದಿಯವರ ಯೋಜನೆಗಳು ಪ್ರತಿಯೊಬ್ಬ ಬಡವನಿಗೂ ತಲುಪುವ ಯೋಜನೆಗಳು ಅದು ಬಿಜೆಪಿಯ ಸಾಧನೆ, ದೇಶದ ಎಲ್ಲಾ ನಾಗರೀಕರಿಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯಾಭ್ಯಾಸ ನೀಡುವ ಸದುದ್ದೇಶ ಹೊಂದಿದ್ದಾರೆ.
ಅವರ ಆಡಳಿತದಲ್ಲಿ ಪಾರದರ್ಶಕತೆ ಹೊಂದಿದೆ ಹಾಗಾಗಿ ಮುಂಬರುವ ಚುನಾವಣೆಯಲ್ಲೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ‌ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರವಿಕುಮಾರ್.ಎಚ್, ಜಿಲ್ಲಾಧ್ಯಕ್ಷ ಶಿವಪ್ರಸಾದ್ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಮುಖಂಡರಾದ ಎಸ್ಎಲ್ಎನ್ ಅಶ್ವಥ್ ನಾರಾಯಣ್ ತಾಲೂಕು ಅಧ್ಯಕ್ಷ ಸುನಿಲ್ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಮತ್ತಿತರರು ಇದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago