ದೇವನಹಳ್ಳಿ: ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿರುವುದನ್ನು ಸದುಉಪಯೋಗಪಡಿಸಿಕೊಳ್ಳಿ ಹಾಗೂ ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸುವುದು ಬಹುಮುಖ್ಯ ಎಂದು ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಾದ ಶ್ರೇಯಸ್ ಮಾಹಿತಿ ನೀಡಿದರು.
ದೇವನಹಳ್ಳಿ ಪಟ್ಟಣದಲ್ಲಿರುವ ಎಸ್ಎಲ್ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ (PMUY)ಉಚಿತ ಗ್ಯಾಸ್ ಮತ್ತು ಗ್ಯಾಸ್ ಸ್ಟೌವ್ ಸೌಲಭ್ಯ ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ, ಮಾತನಾಡಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ .ವಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ ಮೋದಿಯವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿತ್ವ ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೇವಲ ನಾಮಾಕವಸ್ಥೆಗೆ ಕೆಲವರಿಗೆ ತಲುಪಿಸಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಯೋಜನೆಗಳನ್ನು ತಲುಪಿಸಿಲ್ಲ,ಕಟ್ಟಿಗೆ ಓಲೆಯಲ್ಲಿ ಅಡುಗೆ ಮಾಡುವಾಗ ಮಹಿಳೆಯರಿಗೆ ಟಿಬಿ, ಕ್ಷಯ ಮತ್ತು ಶ್ವಾಸಕೋಶದ ಅನಾರೋಗ್ಯ ತೊಂದರೆ ತಪ್ಪಿಸಿ ಮಹಿಳೆಯರ ಅರೋಗ್ಯ ರಕ್ಷಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.
ಬಿಜೆಪಿ ಮುಖಂಡ ಮತ್ತು ಕೊರಮ ಸಮುದಾಯದ ಅಧ್ಯಕ್ಷ ಎಕೆಪಿ ನಾಗೇಶ್ ಮಾತನಾಡಿ ಮೋದಿಯವರ ಯೋಜನೆಗಳು ಪ್ರತಿಯೊಬ್ಬ ಬಡವನಿಗೂ ತಲುಪುವ ಯೋಜನೆಗಳು ಅದು ಬಿಜೆಪಿಯ ಸಾಧನೆ, ದೇಶದ ಎಲ್ಲಾ ನಾಗರೀಕರಿಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯಾಭ್ಯಾಸ ನೀಡುವ ಸದುದ್ದೇಶ ಹೊಂದಿದ್ದಾರೆ.
ಅವರ ಆಡಳಿತದಲ್ಲಿ ಪಾರದರ್ಶಕತೆ ಹೊಂದಿದೆ ಹಾಗಾಗಿ ಮುಂಬರುವ ಚುನಾವಣೆಯಲ್ಲೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರವಿಕುಮಾರ್.ಎಚ್, ಜಿಲ್ಲಾಧ್ಯಕ್ಷ ಶಿವಪ್ರಸಾದ್ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಮುಖಂಡರಾದ ಎಸ್ಎಲ್ಎನ್ ಅಶ್ವಥ್ ನಾರಾಯಣ್ ತಾಲೂಕು ಅಧ್ಯಕ್ಷ ಸುನಿಲ್ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಮತ್ತಿತರರು ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…