ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌.

ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ ಬಗೆಹರಿಸಲು ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ IOC/BPC/HPC ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿಗಳಿಂದ ಖಾತ್ರಿ ಪಡಿಸಿಕೊಂಡಿದೆ.

ಆಯಿಲ್ ಕಂಪನಿಗಳಿಂದ ಜಿಲ್ಲೆಗೆ ಅಡುಗೆ ಅನಿಲ ಸರಬರಾಜು ಪರಿಸ್ಥಿತಿಗನುಗುಣವಾಗಿ ಅಡುಗೆ ಅನಿಲ ಬಳಕೆ ಮಿತಿಗೊಳಿಸುವ ಬಗ್ಗೆ ಸಾರ್ವಜನಿಕರು,ಗ್ರಾಹಕರು,ಸಂಘ ಸಂಸ್ಥೆಗಳು ಇರತರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.

ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ಧೃಡಪಡಿಸಿ ಎಂದಿನಂತೆ ಎಲ್ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡುತ್ತಾರೆ. ಅಲ್ಲದೇ ಜಿಲ್ಲೆಯ ಎಲ್ಲಾ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000 2000 ಸಂಬAಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

4 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

10 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

16 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

17 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago