ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌.

ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ ಬಗೆಹರಿಸಲು ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ IOC/BPC/HPC ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿಗಳಿಂದ ಖಾತ್ರಿ ಪಡಿಸಿಕೊಂಡಿದೆ.

ಆಯಿಲ್ ಕಂಪನಿಗಳಿಂದ ಜಿಲ್ಲೆಗೆ ಅಡುಗೆ ಅನಿಲ ಸರಬರಾಜು ಪರಿಸ್ಥಿತಿಗನುಗುಣವಾಗಿ ಅಡುಗೆ ಅನಿಲ ಬಳಕೆ ಮಿತಿಗೊಳಿಸುವ ಬಗ್ಗೆ ಸಾರ್ವಜನಿಕರು,ಗ್ರಾಹಕರು,ಸಂಘ ಸಂಸ್ಥೆಗಳು ಇರತರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.

ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ಧೃಡಪಡಿಸಿ ಎಂದಿನಂತೆ ಎಲ್ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡುತ್ತಾರೆ. ಅಲ್ಲದೇ ಜಿಲ್ಲೆಯ ಎಲ್ಲಾ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000 2000 ಸಂಬAಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

3 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

4 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

8 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

15 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

15 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago