ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್, ಇಂಟರ್ ನೆಟ್ ಸೇವೆ ಒದಗಿಸಲು ಕ್ರಮ- ಶಾಸಕ ಧೀರಜ್‌ಮುನಿರಾಜ್

ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್‌, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್‌ಮುನಿರಾಜ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.

ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.

ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

5 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

5 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

10 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

12 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

15 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

16 hours ago