ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್, ಇಂಟರ್ ನೆಟ್ ಸೇವೆ ಒದಗಿಸಲು ಕ್ರಮ- ಶಾಸಕ ಧೀರಜ್‌ಮುನಿರಾಜ್

ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್‌, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್‌ಮುನಿರಾಜ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.

ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.

ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

5 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

11 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

13 hours ago