ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್, ಇಂಟರ್ ನೆಟ್ ಸೇವೆ ಒದಗಿಸಲು ಕ್ರಮ- ಶಾಸಕ ಧೀರಜ್‌ಮುನಿರಾಜ್

ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್‌, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್‌ಮುನಿರಾಜ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.

ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.

ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago