ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್ಮುನಿರಾಜ್ ಹೇಳಿದರು.
ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.
ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.
ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…