ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್ಮುನಿರಾಜ್ ಹೇಳಿದರು.
ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.
ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.
ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…