ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್ಮುನಿರಾಜ್ ಹೇಳಿದರು.
ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.
ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.
ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…