ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್, ಇಂಟರ್ ನೆಟ್ ಸೇವೆ ಒದಗಿಸಲು ಕ್ರಮ- ಶಾಸಕ ಧೀರಜ್‌ಮುನಿರಾಜ್

ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್‌, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್‌ಮುನಿರಾಜ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.

ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.

ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

10 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

13 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

16 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago