ಗ್ರಂಥಾಲಯ ಉದ್ಘಾಟನೆಗೆ ಬೆಳಗ್ಗೆ ಆಹ್ವಾನ ಬಂದಿದ್ದು: ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ದೇಶಕ್ಕೆ ಗೌರವ ಸೂಚಿಸಲು ಈ ಮೊದಲೇ ನಿಗದಿಯಾಗಿದ್ದ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಹೋಗಿದ್ದೆ: ಇಷ್ಟಕ್ಕೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ: ಶಾಸಕ ಧೀರಜ್ ಮುನಿರಾಜ್ ಹೇಳಿಕೆ

ದೊಡ್ಡಬಳ್ಳಾಪುರ ನಗರದ 12ನೇ ವಾರ್ಡ್ ನ ವೀರಭಧ್ರನಪಾಳ್ಯದಲ್ಲಿ ನೂತನವಾಗಿ ಗ್ರಂಥಾಲಯ ನಿರ್ಮಾಣವಾಗಿದ್ದು, ಇಂದು ಗ್ರಂಥಾಲಯ ಉದ್ಘಾಟನೆ ಇದೆ ತಾವು ಬರಬೇಕು ಎಂದು ಇಂದು ಬೆಳಗ್ಗೆ ತರಾತುರಿಯಲ್ಲಿ ಬಂದು ನನಗೆ ಆಹ್ವಾನ ನೀಡಲಾಗಿತ್ತು. ಇಂದು ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ದೇಶಕ್ಕೆ ಗೌರವ ಸೂಚಿಸಲು ಈ ಮೊದಲೇ ನಿಗದಿಯಾಗಿದ್ದ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಹೋಗಿದ್ದೆ. ಇಷ್ಟಕ್ಕೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ ಎಂದು‌ ಶಾಸಕ ಧೀರಜ್ ಮುನಿರಾಜ್ ಹೇಳಿದ್ದಾರೆ.

ದಲಿತ ಕಾಲೋನಿಯಲ್ಲಿನ ಉದ್ಘಾಟನೆಗೆ ಬರುವುದಾಗಿ ಹೇಳಿದ ಶಾಸಕರು ಏಕಾಏಕಿ ಕಾರ್ಯಕ್ರಮ ರದ್ದು ಮಾಡಿದ್ದಾರೆ, ತಮ್ಮನ ಮದುವೆ ಪತ್ರಿಕೆ ಅಹ್ವಾನ ಪತ್ರಿಕೆ ಹಂಚುವ ಕಾರಣಕ್ಕೆ ಗ್ರಂಥಾಲಯ ಉದ್ಘಾಟನೆಗೆ ಶಾಸಕರು ಬರದೆ ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿದ್ದಾರೆಂದ್ದು ಆರೋಪಿಸಿ ವೀರಭಧ್ರನಪಾಳ್ಯದ ನಿವಾಸಿಗಳು ಇಂದು ಪತ್ರಿಭಟನೆ ನಡೆಸಿದರು. ಈ ಕುರಿತು ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್ ಅವರು ಗ್ರಂಥಾಲಯ ಉದ್ಘಾಟನೆ ಮಾಡಬೇಕೆಂದು ಇಂದು ಬೆಳಗ್ಗೆ ನನಗೆ ಆಹ್ವಾನ ನೀಡಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ‌ ಗ್ರಂಥಾಲಯ ಉದ್ಘಾಟನೆಗೆ ಹೋಗಲು ಆಗಿಲ್ಲ. ನಾನು ಯಾರ ವಿರೋಧಿಯೂ ಅಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿದೆ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಸದಾ ಗೌರವವನ್ನು ನೀಡುತ್ತೇನೆ. ಸಂವಿಧಾನ ಬಗ್ಗೆ ಅಪಾರವಾದ ಗೌರವವಿದೆ, ಓದುಗರ ಬಗ್ಗೆ ಕಾಳಜಿಯೂ ಇದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಸ್ಥಳೀಯ ಯುವಕ ವಿಜಯಕುಮಾರ್, ಶಾಸಕರು ಸಂವಿಧಾನ ವಿರೋಧಿಯಾಗಿದ್ದು, ದಲಿತರ ಕಾಲೊನಿಯಲ್ಲಿನ ಗ್ರಂಥಾಲಯ ಎಂಬ ಕಾರಣಕ್ಕೆ ಉದಾಸೀನತೆ ತೋರಿದ್ದಾರೆ, ಗ್ರಂಥಾಲಯ ಅಧಿಕಾರಿ ಸರೋಜಮ್ಮನವರಿಗೆ ಧಮ್ಕಿಯಾಕಿ ಗ್ರಂಥಾಲಯ ಕಟ್ಟಡಕ್ಕೆ ಬೀಗ ಹಾಕಿ ಕೊಂಡುಹೋಗುವಂತೆ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂದು ಗಣರಾಜ್ಯೋತ್ಸವ ಹಿನ್ನಲೆ ಒಳ್ಳೇಯ ದಿನವಾದ ಕಾರಣಕ್ಕೆ ಗ್ರಂಥಾಲಯ ಉದ್ಘಾಟನೆಗಾಗಿ ಪೆಂಡಾಲ್ ಸೇರಿದಂತೆ ಅಲಂಕಾರಕ್ಕಾಗಿ ಹಣ ಖರ್ಚು ಮಾಡಲಾಗಿತ್ತು, ಇವತ್ತು ಶಾಸಕರು ಸಹೋದರನ ಮದುವೆ ಅಹ್ವಾನ ಪತ್ರಿಕೆ ಹಂಚುವ ಕಾರಣಕ್ಕೆ ಕಾರ್ಯಕ್ರಮಕ್ಕೆ ಬರದೆ ಉದಾಸೀನತೆ ತೋರಿದ್ದಾರೆ, ಮಧ್ಯಾಹ್ನದೊಳಗೆ ಬರದೆ ಇದ್ದರೆ ನಾವೇ ಬಾಗಿಲ ಬೀಗ ಹೊಡೆದು ಗ್ರಂಥಾಲಯ ಉದ್ಘಾಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ನಂತರ ವಾರ್ಡ್ ನ ಸದಸ್ಯ ಶಿವು ಅವರು ಪಬ್ಲಿಕ್‌ ಮಿರ್ಚಿಯೊಂದಿಗೆ ಮಾತನಾಡಿ, ಸರ್ಕಾರಿ ಕಾರ್ಯಕ್ರಮಗಳು ಏನೇ ಇದ್ದರೂ ಪ್ರೊಟೊಕಾಲ್ ಮೂಲಕವೇ ನಡೆಯಬೇಕು. ಸ್ಥಳೀಯ ಜನಪ್ರತಿನಿಧಿಗಳಿಗೆ ಒಂದೆರೆಡು ದಿನಗಳ ಮುಂಚೆಯೇ ಆಹ್ವಾನ ಪತ್ರಿಕೆ ಮೂಲಕ ಲಿಖಿತವಾಗಿ ತಿಳಿಸಬೇಕು. ಯಾವ ಪ್ರೊಟೊಕಾಲ್ ಪಾಲಿಸದೇ ಇಂದು ಬೆಳಗ್ಗೆ 10ಗಂಟೆ ಕಾರ್ಯಕ್ರಮಕ್ಕೆ ತರಾತುರಿಯಲ್ಲಿ ನಿನ್ನೆ ರಾತ್ರಿ ಸುಮಾರು 9ಗಂಟೆಗೆ ಫೋನ್ ಕಾಲ್ ಮೂಲಕ ಮಾಹಿತಿ ತಿಳಿಸಿದ್ದಾರೆ ಎಂದರು.

ಇಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇವು, ಆದ್ದರಿಂದ ಗ್ರಂಥಾಲಯ ಉದ್ಘಾಟನಾ‌ ಕಾರ್ಯಕ್ರಮಕ್ಕೆ ಹೋಗಲು ಆಗಲಿಲ್ಲ. ಮುಂದಿನ ದಿನಗಳಲ್ಲಿ ಲಿಖಿತವಾಗಿ ಆಹ್ವಾನ ನೀಡಿದರೆ ಖಂಡಿತ ಹೋಗುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

15 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

20 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago