Categories: ಕೋಲಾರ

ಗ್ರಾಪಂ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಸರ್ಕಾರದ ಆದೇಶದಂತೆ ಅನುಮೋದನೆಯಾಗದೇ ಬಾಕಿ ಇರುವ ಎಲ್ಲಾ ಗ್ರಾಮ ಪಂಚಾಯಿತಿ ನೌಕರರನ್ನು ತಕ್ಷಣವೇ ಅನುಮೋದನೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸೋಮವಾರ ತಾಲ್ಲೂಕು ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ. ವಿಜಯಕೃಷ್ಣ ಮಾತನಾಡಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದನೆ ಮಾಡದೇ ಕೆಲವು ನೆಪಗಳನ್ನು ಹೇಳಿ ಮುಂದೂಡುತ್ತಿರುವುದು ಖಂಡನೀಯ ಅನುಮೋದನೆಗಾಗಿ ಬಾಕಿ ಇರುವ ಕಡತಗಳನ್ನು ಕೂಡಲೇ ಜಿಲ್ಲಾ ಪಂಚಾಯತ್ ಕಛೇರಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ವೇತನವನ್ನು ಬಡ್ಡಿ ಸಮೇತ ನೀಡಬೇಕು. ನಿವೃತ್ತರಾದ ನೌಕರರಿಗೆ ಗ್ರಾಚ್ಯೂಟಿ ಹಣವನ್ನು ನೀಡಿ ಗೌರವದಿಂದ ಸತ್ಕರಿಸಿ ಬೀಳ್ಕೊಡಬೇಕು ಮರಣ ಹೊಂದಿದ ಕುಟುಂಬದವರಿಗೆ ಅನುಕಂಪದ ಕೆಲಸವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾಗಾರರನ್ನು ನೇಮಿಸಬೇಕು. ಸ್ವಚ್ಚ ಭಾರತ ನೆಪದಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಮಲದ ಕಾಲುವೆ ಚರಂಡಿಗಳನ್ನು ಸ್ವಚ್ಚಗೊಳಿಸಲು ಆದೇಶಿಸುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಷ್ಟ್ರಧ್ವಜ ಹಾರಿಸಿ ಇಳಿಸುವ ಸಿಬ್ಬಂದಿಗೆ ನೀಡುವ ಭತ್ಯೆಯನ್ನು ಪ್ರತಿ ತಿಂಗಳು ವೇತನದ ಜೊತೆ ನೀಡಬೇಕು. ಈ ಭತ್ಯೆಯನ್ನು ರೂ. 60ಕ್ಕೆ ಹೆಚ್ಚಳ ಮಾಡಿದ್ದು, ಇದರಂತೆ ನೀಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕವನ್ನು ತೆರೆಯಬೇಕು. ಎಸ್.ಎಸ್.ಎಲ್.ಸಿ. ಪಾಸಾಗಿ ಸತತವಾಗಿ 5 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಖಾಲಿಯಾಗಿರುವ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಈ ಬಗ್ಗೆ ಜೇಷ್ಠತಾ ಪಟ್ಟಿ ತಯಾರಿಸಬೇಕು. ಗ್ರಾಮ ಪಂಚಾಯಿತಿ ನೌಕರರ ಮೇಲೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಿರುಕುಳ, ದೌರ್ಜನ್ಯವನ್ನು ನಿಲ್ಲಿಸಬೇಕು ಎಂದರು.

ಪ್ರತಿ ವರ್ಷ ಪಂಪ್ ಆಪರೇಟರ್‌ಗಳಿಗೆ ಬ್ಯಾಟರಿ, ಟೆಸ್ಟರ್ ರೈನ್ ಕೋಟ್ ಸೇರಿದಂತೆ ಪ್ಯಾಕೇಜ್ ನೀಡಬೇಕು. ಎಲ್ಲಾ ಸಿಬ್ಬಂದಿಗೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು, ಕಾರ್ಮಿಕ ಕಾನೂನು ರೀತ್ಯ ವಾರಕ್ಕೊಮ್ಮೆ ರಜೆ ನೀಡುವುದು ಕಡ್ಡಾಯವಾಗಿದೆ. ನೀರುಗಟ್ಟಿಗಳಿಗೆ ವಾರಕ್ಕೊಮ್ಮೆ ರಜೆ ನೀಡಬೇಕು, ಇಲ್ಲವೇ ಓಟಿ ನೀಡಬೇಕು. ಗ್ರಾಮ ಪಂಚಾಯಿತಿಯಿಂದ ಯಾವುದೇ ಸೇವೆಯನ್ನು ನೀಡುವ ಮೊದಲು ಕಡ್ಡಾಯವಾಗಿ ಕಂದಾಯ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಪಂಚಾಯತಿ ಇಒಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಶಿವರಾಜ್, ಖಜಾಂಚಿ ಮುನಿವೆಂಕಟಪ್ಪ, ಮುಖಂಡರಾದ ವೆಂಕಟರಾಮೇಗೌಡ, ಶ್ರೀನಿವಾಸಗೌಡ, ರಾಮಚಂದ್ರ, ಆಂಜಿನಪ್ಪ, ಸಪಾಯತ್ ಖಾನ್, ನಾರಾಯಣಸ್ವಾಮಿ, ರಾಜಪ್ಪ, ಸಂತೋಷ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago