Categories: ಕೋಲಾರ

ಗ್ರಾಪಂ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಸರ್ಕಾರದ ಆದೇಶದಂತೆ ಅನುಮೋದನೆಯಾಗದೇ ಬಾಕಿ ಇರುವ ಎಲ್ಲಾ ಗ್ರಾಮ ಪಂಚಾಯಿತಿ ನೌಕರರನ್ನು ತಕ್ಷಣವೇ ಅನುಮೋದನೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸೋಮವಾರ ತಾಲ್ಲೂಕು ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ. ವಿಜಯಕೃಷ್ಣ ಮಾತನಾಡಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದನೆ ಮಾಡದೇ ಕೆಲವು ನೆಪಗಳನ್ನು ಹೇಳಿ ಮುಂದೂಡುತ್ತಿರುವುದು ಖಂಡನೀಯ ಅನುಮೋದನೆಗಾಗಿ ಬಾಕಿ ಇರುವ ಕಡತಗಳನ್ನು ಕೂಡಲೇ ಜಿಲ್ಲಾ ಪಂಚಾಯತ್ ಕಛೇರಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ವೇತನವನ್ನು ಬಡ್ಡಿ ಸಮೇತ ನೀಡಬೇಕು. ನಿವೃತ್ತರಾದ ನೌಕರರಿಗೆ ಗ್ರಾಚ್ಯೂಟಿ ಹಣವನ್ನು ನೀಡಿ ಗೌರವದಿಂದ ಸತ್ಕರಿಸಿ ಬೀಳ್ಕೊಡಬೇಕು ಮರಣ ಹೊಂದಿದ ಕುಟುಂಬದವರಿಗೆ ಅನುಕಂಪದ ಕೆಲಸವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾಗಾರರನ್ನು ನೇಮಿಸಬೇಕು. ಸ್ವಚ್ಚ ಭಾರತ ನೆಪದಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಮಲದ ಕಾಲುವೆ ಚರಂಡಿಗಳನ್ನು ಸ್ವಚ್ಚಗೊಳಿಸಲು ಆದೇಶಿಸುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಷ್ಟ್ರಧ್ವಜ ಹಾರಿಸಿ ಇಳಿಸುವ ಸಿಬ್ಬಂದಿಗೆ ನೀಡುವ ಭತ್ಯೆಯನ್ನು ಪ್ರತಿ ತಿಂಗಳು ವೇತನದ ಜೊತೆ ನೀಡಬೇಕು. ಈ ಭತ್ಯೆಯನ್ನು ರೂ. 60ಕ್ಕೆ ಹೆಚ್ಚಳ ಮಾಡಿದ್ದು, ಇದರಂತೆ ನೀಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕವನ್ನು ತೆರೆಯಬೇಕು. ಎಸ್.ಎಸ್.ಎಲ್.ಸಿ. ಪಾಸಾಗಿ ಸತತವಾಗಿ 5 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಖಾಲಿಯಾಗಿರುವ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಈ ಬಗ್ಗೆ ಜೇಷ್ಠತಾ ಪಟ್ಟಿ ತಯಾರಿಸಬೇಕು. ಗ್ರಾಮ ಪಂಚಾಯಿತಿ ನೌಕರರ ಮೇಲೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಿರುಕುಳ, ದೌರ್ಜನ್ಯವನ್ನು ನಿಲ್ಲಿಸಬೇಕು ಎಂದರು.

ಪ್ರತಿ ವರ್ಷ ಪಂಪ್ ಆಪರೇಟರ್‌ಗಳಿಗೆ ಬ್ಯಾಟರಿ, ಟೆಸ್ಟರ್ ರೈನ್ ಕೋಟ್ ಸೇರಿದಂತೆ ಪ್ಯಾಕೇಜ್ ನೀಡಬೇಕು. ಎಲ್ಲಾ ಸಿಬ್ಬಂದಿಗೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು, ಕಾರ್ಮಿಕ ಕಾನೂನು ರೀತ್ಯ ವಾರಕ್ಕೊಮ್ಮೆ ರಜೆ ನೀಡುವುದು ಕಡ್ಡಾಯವಾಗಿದೆ. ನೀರುಗಟ್ಟಿಗಳಿಗೆ ವಾರಕ್ಕೊಮ್ಮೆ ರಜೆ ನೀಡಬೇಕು, ಇಲ್ಲವೇ ಓಟಿ ನೀಡಬೇಕು. ಗ್ರಾಮ ಪಂಚಾಯಿತಿಯಿಂದ ಯಾವುದೇ ಸೇವೆಯನ್ನು ನೀಡುವ ಮೊದಲು ಕಡ್ಡಾಯವಾಗಿ ಕಂದಾಯ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಪಂಚಾಯತಿ ಇಒಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಶಿವರಾಜ್, ಖಜಾಂಚಿ ಮುನಿವೆಂಕಟಪ್ಪ, ಮುಖಂಡರಾದ ವೆಂಕಟರಾಮೇಗೌಡ, ಶ್ರೀನಿವಾಸಗೌಡ, ರಾಮಚಂದ್ರ, ಆಂಜಿನಪ್ಪ, ಸಪಾಯತ್ ಖಾನ್, ನಾರಾಯಣಸ್ವಾಮಿ, ರಾಜಪ್ಪ, ಸಂತೋಷ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

15 minutes ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಡುವ ವಿಚಾರ: ಯುವಕರ ನಡುವೆ ಗಲಾಟೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಡುವ ವಿಚಾರಕ್ಕೆ ಯುವಕರು ದೊಣ್ಣೆ ಹಿಡಿದು ಬಡಿದಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ…

40 minutes ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

8 hours ago

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…

19 hours ago

ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…

20 hours ago

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

1 day ago