Categories: ಕೋಲಾರ

ಗ್ರಾಪಂ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಸರ್ಕಾರದ ಆದೇಶದಂತೆ ಅನುಮೋದನೆಯಾಗದೇ ಬಾಕಿ ಇರುವ ಎಲ್ಲಾ ಗ್ರಾಮ ಪಂಚಾಯಿತಿ ನೌಕರರನ್ನು ತಕ್ಷಣವೇ ಅನುಮೋದನೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸೋಮವಾರ ತಾಲ್ಲೂಕು ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ. ವಿಜಯಕೃಷ್ಣ ಮಾತನಾಡಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದನೆ ಮಾಡದೇ ಕೆಲವು ನೆಪಗಳನ್ನು ಹೇಳಿ ಮುಂದೂಡುತ್ತಿರುವುದು ಖಂಡನೀಯ ಅನುಮೋದನೆಗಾಗಿ ಬಾಕಿ ಇರುವ ಕಡತಗಳನ್ನು ಕೂಡಲೇ ಜಿಲ್ಲಾ ಪಂಚಾಯತ್ ಕಛೇರಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ವೇತನವನ್ನು ಬಡ್ಡಿ ಸಮೇತ ನೀಡಬೇಕು. ನಿವೃತ್ತರಾದ ನೌಕರರಿಗೆ ಗ್ರಾಚ್ಯೂಟಿ ಹಣವನ್ನು ನೀಡಿ ಗೌರವದಿಂದ ಸತ್ಕರಿಸಿ ಬೀಳ್ಕೊಡಬೇಕು ಮರಣ ಹೊಂದಿದ ಕುಟುಂಬದವರಿಗೆ ಅನುಕಂಪದ ಕೆಲಸವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾಗಾರರನ್ನು ನೇಮಿಸಬೇಕು. ಸ್ವಚ್ಚ ಭಾರತ ನೆಪದಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಮಲದ ಕಾಲುವೆ ಚರಂಡಿಗಳನ್ನು ಸ್ವಚ್ಚಗೊಳಿಸಲು ಆದೇಶಿಸುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಷ್ಟ್ರಧ್ವಜ ಹಾರಿಸಿ ಇಳಿಸುವ ಸಿಬ್ಬಂದಿಗೆ ನೀಡುವ ಭತ್ಯೆಯನ್ನು ಪ್ರತಿ ತಿಂಗಳು ವೇತನದ ಜೊತೆ ನೀಡಬೇಕು. ಈ ಭತ್ಯೆಯನ್ನು ರೂ. 60ಕ್ಕೆ ಹೆಚ್ಚಳ ಮಾಡಿದ್ದು, ಇದರಂತೆ ನೀಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕವನ್ನು ತೆರೆಯಬೇಕು. ಎಸ್.ಎಸ್.ಎಲ್.ಸಿ. ಪಾಸಾಗಿ ಸತತವಾಗಿ 5 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಖಾಲಿಯಾಗಿರುವ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಈ ಬಗ್ಗೆ ಜೇಷ್ಠತಾ ಪಟ್ಟಿ ತಯಾರಿಸಬೇಕು. ಗ್ರಾಮ ಪಂಚಾಯಿತಿ ನೌಕರರ ಮೇಲೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಿರುಕುಳ, ದೌರ್ಜನ್ಯವನ್ನು ನಿಲ್ಲಿಸಬೇಕು ಎಂದರು.

ಪ್ರತಿ ವರ್ಷ ಪಂಪ್ ಆಪರೇಟರ್‌ಗಳಿಗೆ ಬ್ಯಾಟರಿ, ಟೆಸ್ಟರ್ ರೈನ್ ಕೋಟ್ ಸೇರಿದಂತೆ ಪ್ಯಾಕೇಜ್ ನೀಡಬೇಕು. ಎಲ್ಲಾ ಸಿಬ್ಬಂದಿಗೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು, ಕಾರ್ಮಿಕ ಕಾನೂನು ರೀತ್ಯ ವಾರಕ್ಕೊಮ್ಮೆ ರಜೆ ನೀಡುವುದು ಕಡ್ಡಾಯವಾಗಿದೆ. ನೀರುಗಟ್ಟಿಗಳಿಗೆ ವಾರಕ್ಕೊಮ್ಮೆ ರಜೆ ನೀಡಬೇಕು, ಇಲ್ಲವೇ ಓಟಿ ನೀಡಬೇಕು. ಗ್ರಾಮ ಪಂಚಾಯಿತಿಯಿಂದ ಯಾವುದೇ ಸೇವೆಯನ್ನು ನೀಡುವ ಮೊದಲು ಕಡ್ಡಾಯವಾಗಿ ಕಂದಾಯ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಪಂಚಾಯತಿ ಇಒಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಶಿವರಾಜ್, ಖಜಾಂಚಿ ಮುನಿವೆಂಕಟಪ್ಪ, ಮುಖಂಡರಾದ ವೆಂಕಟರಾಮೇಗೌಡ, ಶ್ರೀನಿವಾಸಗೌಡ, ರಾಮಚಂದ್ರ, ಆಂಜಿನಪ್ಪ, ಸಪಾಯತ್ ಖಾನ್, ನಾರಾಯಣಸ್ವಾಮಿ, ರಾಜಪ್ಪ, ಸಂತೋಷ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago