Categories: ಕೋಲಾರ

ಗ್ರಾಪಂ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಸರ್ಕಾರದ ಆದೇಶದಂತೆ ಅನುಮೋದನೆಯಾಗದೇ ಬಾಕಿ ಇರುವ ಎಲ್ಲಾ ಗ್ರಾಮ ಪಂಚಾಯಿತಿ ನೌಕರರನ್ನು ತಕ್ಷಣವೇ ಅನುಮೋದನೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸೋಮವಾರ ತಾಲ್ಲೂಕು ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ. ವಿಜಯಕೃಷ್ಣ ಮಾತನಾಡಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರದ ಆದೇಶದಂತೆ ಅನುಮೋದನೆ ಮಾಡದೇ ಕೆಲವು ನೆಪಗಳನ್ನು ಹೇಳಿ ಮುಂದೂಡುತ್ತಿರುವುದು ಖಂಡನೀಯ ಅನುಮೋದನೆಗಾಗಿ ಬಾಕಿ ಇರುವ ಕಡತಗಳನ್ನು ಕೂಡಲೇ ಜಿಲ್ಲಾ ಪಂಚಾಯತ್ ಕಛೇರಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ವೇತನವನ್ನು ಬಡ್ಡಿ ಸಮೇತ ನೀಡಬೇಕು. ನಿವೃತ್ತರಾದ ನೌಕರರಿಗೆ ಗ್ರಾಚ್ಯೂಟಿ ಹಣವನ್ನು ನೀಡಿ ಗೌರವದಿಂದ ಸತ್ಕರಿಸಿ ಬೀಳ್ಕೊಡಬೇಕು ಮರಣ ಹೊಂದಿದ ಕುಟುಂಬದವರಿಗೆ ಅನುಕಂಪದ ಕೆಲಸವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾಗಾರರನ್ನು ನೇಮಿಸಬೇಕು. ಸ್ವಚ್ಚ ಭಾರತ ನೆಪದಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಮಲದ ಕಾಲುವೆ ಚರಂಡಿಗಳನ್ನು ಸ್ವಚ್ಚಗೊಳಿಸಲು ಆದೇಶಿಸುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಷ್ಟ್ರಧ್ವಜ ಹಾರಿಸಿ ಇಳಿಸುವ ಸಿಬ್ಬಂದಿಗೆ ನೀಡುವ ಭತ್ಯೆಯನ್ನು ಪ್ರತಿ ತಿಂಗಳು ವೇತನದ ಜೊತೆ ನೀಡಬೇಕು. ಈ ಭತ್ಯೆಯನ್ನು ರೂ. 60ಕ್ಕೆ ಹೆಚ್ಚಳ ಮಾಡಿದ್ದು, ಇದರಂತೆ ನೀಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕವನ್ನು ತೆರೆಯಬೇಕು. ಎಸ್.ಎಸ್.ಎಲ್.ಸಿ. ಪಾಸಾಗಿ ಸತತವಾಗಿ 5 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಖಾಲಿಯಾಗಿರುವ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಈ ಬಗ್ಗೆ ಜೇಷ್ಠತಾ ಪಟ್ಟಿ ತಯಾರಿಸಬೇಕು. ಗ್ರಾಮ ಪಂಚಾಯಿತಿ ನೌಕರರ ಮೇಲೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಿರುಕುಳ, ದೌರ್ಜನ್ಯವನ್ನು ನಿಲ್ಲಿಸಬೇಕು ಎಂದರು.

ಪ್ರತಿ ವರ್ಷ ಪಂಪ್ ಆಪರೇಟರ್‌ಗಳಿಗೆ ಬ್ಯಾಟರಿ, ಟೆಸ್ಟರ್ ರೈನ್ ಕೋಟ್ ಸೇರಿದಂತೆ ಪ್ಯಾಕೇಜ್ ನೀಡಬೇಕು. ಎಲ್ಲಾ ಸಿಬ್ಬಂದಿಗೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು, ಕಾರ್ಮಿಕ ಕಾನೂನು ರೀತ್ಯ ವಾರಕ್ಕೊಮ್ಮೆ ರಜೆ ನೀಡುವುದು ಕಡ್ಡಾಯವಾಗಿದೆ. ನೀರುಗಟ್ಟಿಗಳಿಗೆ ವಾರಕ್ಕೊಮ್ಮೆ ರಜೆ ನೀಡಬೇಕು, ಇಲ್ಲವೇ ಓಟಿ ನೀಡಬೇಕು. ಗ್ರಾಮ ಪಂಚಾಯಿತಿಯಿಂದ ಯಾವುದೇ ಸೇವೆಯನ್ನು ನೀಡುವ ಮೊದಲು ಕಡ್ಡಾಯವಾಗಿ ಕಂದಾಯ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಪಂಚಾಯತಿ ಇಒಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಶಿವರಾಜ್, ಖಜಾಂಚಿ ಮುನಿವೆಂಕಟಪ್ಪ, ಮುಖಂಡರಾದ ವೆಂಕಟರಾಮೇಗೌಡ, ಶ್ರೀನಿವಾಸಗೌಡ, ರಾಮಚಂದ್ರ, ಆಂಜಿನಪ್ಪ, ಸಪಾಯತ್ ಖಾನ್, ನಾರಾಯಣಸ್ವಾಮಿ, ರಾಜಪ್ಪ, ಸಂತೋಷ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

53 minutes ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

3 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

4 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

9 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

17 hours ago