ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಸಿಐಟಿಯು ನೇತೃತ್ವದ ಗ್ರಾಪಂ ನೌಕರರ ಸಂಘವು ನಗರದ ಜಿಲ್ಲಾ ಪಂಚಾಯತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಅಧಿಕಾರಿಗಳು ಗ್ರಾಪಂ ನೌಕರರನ್ನು ಹೀನಾಯವಾಗಿ ನೋಡಿಕೊಳ್ಳುತ್ತಾರೆ ಕೆಲಸ ಮಾಡಲಿಕ್ಕೆ ನೌಕರರು ಬೇಕು ಸಂಬಳ ಮಾತ್ರ ಕೇಳಬಾರದು ಅಂತ ಪರಿಸ್ಥಿತಿಯಲ್ಲಿ ಇದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯತಿ ನೌಕರರು ಎಂದು ಪರಿಗಣಿಸುವ ಬಿಲ್ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟರ್, ಜವಾನ, ಕ್ಲರ್ಕ್ಗಳಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿಗೊಳಿಸಲು ಒತ್ತಾಯಿಸಿ 2022 ರಿಂದ ಪ್ರತಿಭಟನೆ ನಡೆಸಿದರೂ ಬೇಡಿಕೆ ಈಡೇರಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ನೀಡಿದ್ದ ಭರವಸೆಗಳು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿವೃತ್ತ ನೌಕರರಿಗೆ ವರ್ಷಕ್ಕೆ 15 ದಿನಗಳ ವೇತನ ಆಧರಿಸಿ ಪಿಂಚಣಿ ನೀಡಬೇಕು. ಕನಿಷ್ಠ ಆರು ಸಾವಿರ ರೂ.ಗಳ ಪಿಂಚಣಿ ನೀಡಬೇಕಿದ್ದರೂ ಕೈಗೆ ನಿಲುಕಿಲ್ಲ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಗ್ರೇಡ್-2 ಕಾರ್ಯದರ್ಶಿ ಇತರೆ ಹುದ್ದೆಗಳಿಗೆ ಬಡ್ತಿ ಅವಕಾಶ ಇದೆ. ಆದರೆ, ಅನೇಕ ಗ್ರಾಪಂಗಳು ಮೇಲ್ದರ್ಜೆಗೇರದ್ದರಿಂದ ಹಿನ್ನಡೆಯಾಗಿದೆ. 5626 ಗ್ರಾಮ ಪಂಚಾಯತ್ಗಳಲ್ಲಿ 1500 ಮಾತ್ರ ಮೇಲ್ದರ್ಜೆಗೇರಿವೆ. ಅರ್ಹ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಪದೋನ್ನತಿಗೆ ದಾರಿ ಮಾಡಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಖಜಾಂಚಿ ಕೇಶವರಾವ್, ವಿವಿಧ ತಾಲೂಕುಗಳ ಪದಾಧಿಕಾರಿಗಳಾದ ಮೋಹನ್, ತ್ಯಾಗರಾಜ್, ರಾಣಿ, ರಾಮಕೃಷ್ಣಪ್ಪ, ಸುಬ್ರಮಣಿ, ಜೈಶಂಕರಪ್ಪ, ಚಂದ್ರಪ್ಪ, ನಾರಾಯಣಸ್ವಾಮಿ, ಶ್ರೀನಿವಾಸ್, ಶಿವರಾಜ್, ಮುನಿವೆಂಕಟಪ್ಪ, ರಾಮೇಗೌಡ,ಮುಂತಾದವರು ವಹಿಸಿದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…