ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಸಿಐಟಿಯು ನೇತೃತ್ವದ ಗ್ರಾಪಂ ನೌಕರರ ಸಂಘವು ನಗರದ ಜಿಲ್ಲಾ ಪಂಚಾಯತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಅಧಿಕಾರಿಗಳು ಗ್ರಾಪಂ ನೌಕರರನ್ನು ಹೀನಾಯವಾಗಿ ನೋಡಿಕೊಳ್ಳುತ್ತಾರೆ ಕೆಲಸ ಮಾಡಲಿಕ್ಕೆ ನೌಕರರು ಬೇಕು ಸಂಬಳ ಮಾತ್ರ ಕೇಳಬಾರದು ಅಂತ ಪರಿಸ್ಥಿತಿಯಲ್ಲಿ ಇದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯತಿ ನೌಕರರು ಎಂದು ಪರಿಗಣಿಸುವ ಬಿಲ್ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟರ್, ಜವಾನ, ಕ್ಲರ್ಕ್ಗಳಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿಗೊಳಿಸಲು ಒತ್ತಾಯಿಸಿ 2022 ರಿಂದ ಪ್ರತಿಭಟನೆ ನಡೆಸಿದರೂ ಬೇಡಿಕೆ ಈಡೇರಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ನೀಡಿದ್ದ ಭರವಸೆಗಳು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿವೃತ್ತ ನೌಕರರಿಗೆ ವರ್ಷಕ್ಕೆ 15 ದಿನಗಳ ವೇತನ ಆಧರಿಸಿ ಪಿಂಚಣಿ ನೀಡಬೇಕು. ಕನಿಷ್ಠ ಆರು ಸಾವಿರ ರೂ.ಗಳ ಪಿಂಚಣಿ ನೀಡಬೇಕಿದ್ದರೂ ಕೈಗೆ ನಿಲುಕಿಲ್ಲ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಗ್ರೇಡ್-2 ಕಾರ್ಯದರ್ಶಿ ಇತರೆ ಹುದ್ದೆಗಳಿಗೆ ಬಡ್ತಿ ಅವಕಾಶ ಇದೆ. ಆದರೆ, ಅನೇಕ ಗ್ರಾಪಂಗಳು ಮೇಲ್ದರ್ಜೆಗೇರದ್ದರಿಂದ ಹಿನ್ನಡೆಯಾಗಿದೆ. 5626 ಗ್ರಾಮ ಪಂಚಾಯತ್ಗಳಲ್ಲಿ 1500 ಮಾತ್ರ ಮೇಲ್ದರ್ಜೆಗೇರಿವೆ. ಅರ್ಹ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಪದೋನ್ನತಿಗೆ ದಾರಿ ಮಾಡಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಖಜಾಂಚಿ ಕೇಶವರಾವ್, ವಿವಿಧ ತಾಲೂಕುಗಳ ಪದಾಧಿಕಾರಿಗಳಾದ ಮೋಹನ್, ತ್ಯಾಗರಾಜ್, ರಾಣಿ, ರಾಮಕೃಷ್ಣಪ್ಪ, ಸುಬ್ರಮಣಿ, ಜೈಶಂಕರಪ್ಪ, ಚಂದ್ರಪ್ಪ, ನಾರಾಯಣಸ್ವಾಮಿ, ಶ್ರೀನಿವಾಸ್, ಶಿವರಾಜ್, ಮುನಿವೆಂಕಟಪ್ಪ, ರಾಮೇಗೌಡ,ಮುಂತಾದವರು ವಹಿಸಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…