ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಸಿಐಟಿಯು ನೇತೃತ್ವದ ಗ್ರಾಪಂ ನೌಕರರ ಸಂಘವು ನಗರದ ಜಿಲ್ಲಾ ಪಂಚಾಯತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಅಧಿಕಾರಿಗಳು ಗ್ರಾಪಂ ನೌಕರರನ್ನು ಹೀನಾಯವಾಗಿ ನೋಡಿಕೊಳ್ಳುತ್ತಾರೆ ಕೆಲಸ ಮಾಡಲಿಕ್ಕೆ ನೌಕರರು ಬೇಕು ಸಂಬಳ ಮಾತ್ರ ಕೇಳಬಾರದು ಅಂತ ಪರಿಸ್ಥಿತಿಯಲ್ಲಿ ಇದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯತಿ ನೌಕರರು ಎಂದು ಪರಿಗಣಿಸುವ ಬಿಲ್ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟರ್, ಜವಾನ, ಕ್ಲರ್ಕ್ಗಳಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿಗೊಳಿಸಲು ಒತ್ತಾಯಿಸಿ 2022 ರಿಂದ ಪ್ರತಿಭಟನೆ ನಡೆಸಿದರೂ ಬೇಡಿಕೆ ಈಡೇರಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ನೀಡಿದ್ದ ಭರವಸೆಗಳು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿವೃತ್ತ ನೌಕರರಿಗೆ ವರ್ಷಕ್ಕೆ 15 ದಿನಗಳ ವೇತನ ಆಧರಿಸಿ ಪಿಂಚಣಿ ನೀಡಬೇಕು. ಕನಿಷ್ಠ ಆರು ಸಾವಿರ ರೂ.ಗಳ ಪಿಂಚಣಿ ನೀಡಬೇಕಿದ್ದರೂ ಕೈಗೆ ನಿಲುಕಿಲ್ಲ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಗ್ರೇಡ್-2 ಕಾರ್ಯದರ್ಶಿ ಇತರೆ ಹುದ್ದೆಗಳಿಗೆ ಬಡ್ತಿ ಅವಕಾಶ ಇದೆ. ಆದರೆ, ಅನೇಕ ಗ್ರಾಪಂಗಳು ಮೇಲ್ದರ್ಜೆಗೇರದ್ದರಿಂದ ಹಿನ್ನಡೆಯಾಗಿದೆ. 5626 ಗ್ರಾಮ ಪಂಚಾಯತ್ಗಳಲ್ಲಿ 1500 ಮಾತ್ರ ಮೇಲ್ದರ್ಜೆಗೇರಿವೆ. ಅರ್ಹ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಪದೋನ್ನತಿಗೆ ದಾರಿ ಮಾಡಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಖಜಾಂಚಿ ಕೇಶವರಾವ್, ವಿವಿಧ ತಾಲೂಕುಗಳ ಪದಾಧಿಕಾರಿಗಳಾದ ಮೋಹನ್, ತ್ಯಾಗರಾಜ್, ರಾಣಿ, ರಾಮಕೃಷ್ಣಪ್ಪ, ಸುಬ್ರಮಣಿ, ಜೈಶಂಕರಪ್ಪ, ಚಂದ್ರಪ್ಪ, ನಾರಾಯಣಸ್ವಾಮಿ, ಶ್ರೀನಿವಾಸ್, ಶಿವರಾಜ್, ಮುನಿವೆಂಕಟಪ್ಪ, ರಾಮೇಗೌಡ,ಮುಂತಾದವರು ವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…