ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ ಪಂಚಾಯಿತಿ ನೌಕರರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರಿಗೆ 36,000 ಕನಿಷ್ಠ ವೇತನ, ಪಿಂಚಣಿ ಕನಿಷ್ಠ 6,000 ಕ್ಕೆ ನಿಗದಿಪಡಿಸುವುದು, ಎಲ್ಲ ಗ್ರಾಮ ಪಂಚಾಯಿತಿಗಳಿಗೆ ದ್ವಿತೀಯ ದರ್ಜೆ ಗುಮಾಸ್ತರ ನೇಮಕ, ಹಳೆ ಪಿಂಚಣಿ ಯೋಜನೆ ಜಾರಿ, ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಕಾರರು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಈಗಾಗಲೇ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರ ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು. ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಲೆಕ್ಕ ಸಹಾಯಕ ಹುದ್ದೆ ಸ್ಥಾಪಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಲ್ಲಾ ನೌಕರರಿಗೆ ಕೋವಿಡ್ ಪರಿಹಾರ ನಿಧಿ, ಬಾಕಿ ವೇತನ, ಅನುಕಂಪ ಆಧಾರಿತ ಕೆಲಸ, ತೆರಿಗೆ ಸಂಗ್ರಹ ಗುರಿ ಉಪಧನ ಕೊಡಿಸಲು ಜಿಲ್ಲಾ ಪಂಚಾಯಿತಿ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಮರನಾರಾಯಣ ಕೇಶವರಾವ್, ರಾಮಕೃಷ್ಣಪ್ಪ, ಮೋಹನ್, ಚಂದ್ರಪ್ಪ ವೆಂಕಟರಾಮೇಗೌಡ, ನಾಗೇಶ್, ರೆಡ್ಡೆಪ್ಪ, ಶಿವ, ರಾಮಚಂದ್ರಪ್ಪ ಮುಂತಾದವರು ಇದ್ದರು
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…