Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಅ.1ರಂದು ಕಲ್ಬುರ್ಗಿಯ ಪ್ರಿಯಾಂಕ ಖರ್ಗೆ ಮನೆ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ 31 ಸಾವಿರಕ್ಕೆ ಏರಿಸಬೇಕು ಮತ್ತು ನಿವೃತ್ತರಿಗೆ ಪಿಂಚಣಿಯನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಕಲ್ಬುರ್ಗಿಯಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆರವರ ಮನೆ ಮುಂದೆ ಅಕ್ಟೋಬರ್1 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,

ನಗರದಲ್ಲಿ ನಡೆದ ಗ್ರಾಮ ಪಂಚಾಯಿತಿ ನೌಕರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷದಿಂದ ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ಎಲ್ಲಾ ನೌಕರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಲೆಕ್ಕ ಸಹಾಯಕ ಹುದ್ದೆಗಳನ್ನು ಸೃಷ್ಠಿಸಬೇಕು, ಗ್ರೇಡ್ 1 ಕಾರ್ಯದರ್ಶಿ ಹುದ್ದೆಗಳಿಗೆ ಶೇ.100 ರಷ್ಟು ಸ್ಥಾನಗಳನ್ನು, ಗ್ರೇಡ್ 2 ಕಾರ್ಯದರ್ಶಿಗಳಿಗೆ ಶೇಕಡ 50 ರಷ್ಟು, ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಶೇ.50 ರಷ್ಟು ಸ್ಥಾನಗಳನ್ನು ಬಡ್ತಿ ನೀಡಬೇಕು, ಅನ್ಯ ಇಲಾಖೆಯವರಿಗೆ ಬಡ್ತಿ ನೀಡಬಾರದು ಎಂದು ಒತ್ತಾಯಿಸಿದರು.

ಎಸ್‌ಎಸ್‌ಎಲ್‌ಸಿ ಪಾಸಾಗಿ ಸತತವಾಗಿ 5 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು, ನಿವೃತ್ತರಾದ ಸಿಬ್ಬಂದಿಯ ಕುಟುಂಬಕ್ಕೆ ಖಾಲಿ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನೀಡಬೇಕು ಮತ್ತಿತರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಒಂದು ಸಾವಿರಕ್ಕೂ ಅಧಿಕ ಮಂದಿ ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು

ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಮರನಾರಾಯಣ, ಖಜಾಂಚಿ ಕೇಶವರಾವ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಮುಖಂಡರಾದ ಮೋಹನ್, ಶಿವರಾಜ್, ಶ್ರೀರಾಮ್, ಮಂಜುನಾಥ್, ವೆಂಕಟರಾಮೇಗೌಡ, ತ್ಯಾಗರಾಜ್, ಚಂದ್ರು ರಾಮನಬೋವಿ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

24 minutes ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

11 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

22 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

22 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago