Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಫೆ. 20 ಮುಖ್ಯಮಂತ್ರಿ ಮನೆ ಮುತ್ತಿಗೆಗೆ ನಿರ್ಧಾರ- ಎಂ.ಬಿ ನಾಡಗೌಡ,

ಕೋಲಾರ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಫೆಬ್ರವರಿ 20 ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಎಂ.ಬಿ ನಾಡಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್, ಕ್ಲಕ್, ಡಾಟಾ ಎಂಟ್ರಿ ಆಪರೇಟರ್ ಗಳ ವಿಭಾಗ ಮಟ್ಟದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲವಾಗಿದೆ ಕೂಡಲೇ ಸರ್ಕಾರ ನೌಕರರ ಹಿತಕಾಯುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ ಸುಮಾರು ತಿಂಗಳಿಂದ ವೇತನ ಕೊಟ್ಟಿಲ್ಲ ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ ಇದರ ವಿರುದ್ದ ಸಿಎಂ ಮನೆ ಮುತ್ತಿಗೆ ಹಾಕಿ ನ್ಯಾಯ ಕೇಳಲಾಗುತ್ತದೆ ಎರಡು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ ಕರ ಸಂಗ್ರಹಗಾರ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರು ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನರಿಗೆ ಅನುಕೂಲಕರವಾದ ಯೋಜನೆಗಳನ್ನು ತಲುಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಬದುಕು ಹಸನಾಗಿಲ್ಲ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ ಆದಾಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ನಿಗದಿಪಡಿಸಿ ವೇತನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಮರನಾರಾಯಣ್, ಖಜಾಂಚಿ ಕೇಶವರಾಜ್, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಪಾಪಣ್ಣ ಸೇರಿದಂತೆ ಎರಡು ಜಿಲ್ಲೆಯ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳು ಮುಖಂಡರು ಇದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

1 hour ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

10 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

20 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

22 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago