Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಫೆ. 20 ಮುಖ್ಯಮಂತ್ರಿ ಮನೆ ಮುತ್ತಿಗೆಗೆ ನಿರ್ಧಾರ- ಎಂ.ಬಿ ನಾಡಗೌಡ,

ಕೋಲಾರ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಫೆಬ್ರವರಿ 20 ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಎಂ.ಬಿ ನಾಡಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್, ಕ್ಲಕ್, ಡಾಟಾ ಎಂಟ್ರಿ ಆಪರೇಟರ್ ಗಳ ವಿಭಾಗ ಮಟ್ಟದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲವಾಗಿದೆ ಕೂಡಲೇ ಸರ್ಕಾರ ನೌಕರರ ಹಿತಕಾಯುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ ಸುಮಾರು ತಿಂಗಳಿಂದ ವೇತನ ಕೊಟ್ಟಿಲ್ಲ ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ ಇದರ ವಿರುದ್ದ ಸಿಎಂ ಮನೆ ಮುತ್ತಿಗೆ ಹಾಕಿ ನ್ಯಾಯ ಕೇಳಲಾಗುತ್ತದೆ ಎರಡು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ ಕರ ಸಂಗ್ರಹಗಾರ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರು ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನರಿಗೆ ಅನುಕೂಲಕರವಾದ ಯೋಜನೆಗಳನ್ನು ತಲುಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಬದುಕು ಹಸನಾಗಿಲ್ಲ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ ಆದಾಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ನಿಗದಿಪಡಿಸಿ ವೇತನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಮರನಾರಾಯಣ್, ಖಜಾಂಚಿ ಕೇಶವರಾಜ್, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಪಾಪಣ್ಣ ಸೇರಿದಂತೆ ಎರಡು ಜಿಲ್ಲೆಯ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳು ಮುಖಂಡರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago